Breaking News

ಪಾಪು ನಿಧನಕ್ಕೆ ಶಾಸಕ ಬಾಲಚಂದ್ರ ಜಾರಕಿಹೊಳಿ ಕಂಬನಿ

Spread the love

ಗೋಕಾಕ: ಕನ್ನಡದ ಅಸ್ಮಿತೆ, ಕನ್ನಡ ಏಕೀಕರಣದ ರೂವಾರಿ,ಮೇರು ಪತ್ರಕರ್ತ -ಸಾಹಿತಿ, ಶತಾಯುಷಿ, ನಾಡೋಜ ಡಾ.ಪಾಟೀಲ್ ಪುಟ್ಟಪ್ಪ (ಪಾಪು) ನವರ ನಿಧನಕ್ಕೆ ಕೆಎಮ್ಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಕನ್ನಡ ನೆಲ- ಜಲ, ಭಾಷೆ, ಕರ್ನಾಟಕ ಏಕೀಕರಣ, ಗೋಕಾಕ ವರದಿ ಜಾರಿಗೆಗಾಗಿ ತಮ್ಮ ಇಡೀ ಜೀವನವನ್ನೇ ಹೋರಾಟಕ್ಕೆ ಮುಡುಪಾಗಿಟ್ಟಿದ್ದರು. ಕನ್ನಡ ನಾಡಿನ ಸಂಸ್ಕೃತಿಗೆ ಸಾಕಷ್ಟು ಮೆರಗು ನೀಡಿದ ಪಾಟೀಲ್ ಪುಟ್ಟಪ್ಪ ಅವರ ಸಾಧನೆ ಅವಿಸ್ಮರಣಿಯವಾಗಿದೆ.

ಇಂತಹ ಒಬ್ಬ ಮಹಾನ್ ಸಾಧಕನ ಅಗಲಿಕೆಯಿಂದ ಕನ್ನಡ ನಾಡಿಗೆ ತುಂಬಲಾರದಷ್ಟು ನಷ್ಟವಾಗಿದೆ. ಪಾಟೀಲ್ ಪುಟ್ಟಪ್ಪರವರ ಹೋರಾಟದ ಬದುಕು ನಾಡಿನ ಜನತೆಗೆ ಅನುಕರಣಿಯವಾಗಲಿ. ಅವರ ಕುಟುಂಬ ವರ್ಗದವರಿಗೆ ದುಖಃವನ್ನು ಸಹಿಸುವ ಶಕ್ತಿ ಪರಮಾತ್ಮ ನೀಡಲಿ. ಮೃತರ ಆತ್ಮಕ್ಕೆ ಚಿರ ಶಾಂತಿ ನೀಡಲೆಂದು ಆ ಭಗವಂಥನಲ್ಲಿ ಪ್ರಾರ್ಥಿಸುವದಾಗಿ ಶಾಸಕ ಹಾಗೂ ಕೆಎಮ್ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ತಮ್ಮ ಶೋಕ ಸಂದೇಶದಲ್ಲಿ ಕಂಬನಿ ಮಿಡಿದಿದ್ದಾರೆ.


Spread the love

About Ad9 News

Check Also

ಮಕ್ಕಳಿಗೆ ಮೌಲ್ಯಯುತ ಶಿಕ್ಷಣ ಕೊಡಿಸಿ: ಡಾ. ಭೀಮಾಶಂಕರ ಎಸ್ ಗುಳೇದ

Spread the love  ರಾಯಬಾಗ: ಮಕ್ಕಳಿಗೆ ಮೌಲ್ಯಯುತ ಶಿಕ್ಷಣ ಕೊಡಿಸುವುದರ ಮೂಲಕ ಆದರ್ಶ ವ್ಯಕ್ತಿಗಳನ್ನಾಗಿ ರೂಪಿಸಿ ಎಂದು ಬೆಳಗಾವಿ ಎಸ್ …