ಮೂಡಲಗಿ: ಪಟ್ಟಣದ ಸೆಂಟ್ ಮೇರಿ ಆಂಗ್ಲ ಮಾದ್ಯಮ ಶಾಲೆಯ ೩ ನೇ ತರಗತಿಯ ವಿದ್ಯಾರ್ಥಿ ಶಿವಪ್ರಸಾದ ಕಡಾಡಿ ಗದಗ ಜಿಲ್ಲೆಯ ನೀಲಗುಂದದಲ್ಲಿ ಜರುಗಿದ ೨೦ ನೇಯ ರಾಜ್ಯ ಮಟ್ಟದ ಮಲ್ಲಕಂಬ ಕ್ರೀಡಾ ಕೂಟದಲ್ಲಿ ೧೨ ವರ್ಷದೊಳಗಿನ ಬಾಲಕರ ವಿಭಾಗದಲ್ಲಿ ೩ ನೇ ಸ್ಥಾನ ಪಡೆದು ಆಂದ್ರಪ್ರದೇಶದ ವಿಜಯವಾಡದಲ್ಲಿ ಜರುಗುವ ರಾಷ್ಷ್ರ ಮಟ್ಟದ ಮಲ್ಲಕಂಬ ಕ್ರೀಡಾಕೂಟಕ್ಕೆ ಆಯ್ಕೆಯಾಗಿರುವದಾಗಿ ಸಂಸ್ಥೆಯ ಅಧ್ಯಕ್ಷ ಡ್ಯಾನಿಯಲ್ ಸರ್ವಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ವಿದ್ಯಾರ್ಥಿಗೆ ಚೈತನ್ಯ ಆಶ್ರಮ ವಸತಿ ಶಾಲೆಯ ಮಲ್ಲಕಂಬ ಯೋಗ ಶಿಕ್ಷಕ ಮೆಹೆಬೂಬ ಬಂಡಿವಾಡ ತರಬೇತಿ ನೀಡಿದ್ದಾರೆ. ಬಿಇಒ ಅಜೀತ ಮನ್ನಿಕೇರಿ, ಪ್ರಧಾನಗುರು ಐ.ಎಚ್ ಶೇಖ ಮತ್ತು ಆಡಳಿತ ಮಂಡಳಿಯ ಸದಸ್ಯರು ಹಾಗೂ ಶಿಕ್ಷಕ ಸಮೂಹ ವಿದ್ಯಾರ್ಥಿಯ ಯೋಗ ಸಾಧನೆಗೆ ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ.
Check Also
ಕೇಂದ್ರ ಸಹಕಾರ ಸಚಿವ ಅಮಿತ ಷಾ ಅವರನ್ನು ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ರಾ.ಸ.ಸ.ಕಾ.ಮ ಮಂಡಳಿ ನಿರ್ದೇಶಕ ಅಶೋಕ ಪಾಟೀಲ
Spread the love ಗೋಕಾಕ- ಘಟಪ್ರಭಾ ಸಹಕಾರಿ ಕಾರ್ಖಾನೆ ಅಧ್ಯಕ್ಷ ಅಶೋಕ ಪಾಟೀಲ ಅವರು ನವದೆಹಲಿಯ ರಾಷ್ಟ್ರೀಯ ಸಹಕಾರಿ ಸಕ್ಕರೆ …