Breaking News

Ad9 News

ಮೂಡಲಗಿ ವಲಯದ 29 ಪ್ರೌಢ ಶಾಲೆಗಳಿಂದ ಶೇ 100 ರಷ್ಟು ಫಲಿತಾಂಶ

*ಗೋಕಾಕ* : ಶೈಕ್ಷಣಿಕ ಕ್ಷೇತ್ರದಲ್ಲಿ ಮೂಡಲಗಿ ವಲಯವು ಉತ್ತಮ ಸಾಧನೆ ಮಾಡುತ್ತಿದ್ದು, ಮುಂದಿನ ಶೈಕ್ಷಣಿಕ ವರ್ಷದಲ್ಲಿಯೂ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಲು ಶಿಕ್ಷಕರು ಶ್ರಮಿಸುವಂತೆ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ಇಲ್ಲಿಯ ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ಮೂಡಲಗಿ ಶೈಕ್ಷಣಿಕ ವಲಯದ 2021-22ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ 29 ಪ್ರೌಢ ಶಾಲೆಗಳ ಮುಖ್ಯೋಪಾಧ್ಯಾಯರಿಗೆ ಸ್ಮರಣಿಕೆ ಹಾಗೂ ತಮ್ಮ ಅಭಿನಂದನಾ ಪತ್ರ ವಿತರಿಸಿ …

Read More »

ಕೈಕೊಟ್ಟ ಮಳೆ: ಮೂಡಲಗಿ-ಗೋಕಾಕ ತಾಲೂಕುಗಳನ್ನು ಬರಪೀಡಿತ ತಾಲೂಕುಗಳನ್ನಾಗಿ ಘೋಷಿಸಲು ಸರ್ಕಾರಕ್ಕೆ ಮನವಿ : ಶಾಸಕ ಬಾಲಚಂದ್ರ ಜಾರಕಿಹೊಳಿ

*ಮೂಡಲಗಿ* : ಇದೇ ಅಗಸ್ಟ ತಿಂಗಳಲ್ಲಿ ಮೂಡಲಗಿ ತಾಲೂಕಿನಲ್ಲಿ ಶೇ 43 ಮತ್ತು ಗೋಕಾಕ ತಾಲೂಕಿನಲ್ಲಿ ಶೇ 80 ರಷ್ಟು ಪ್ರಮಾಣದಲ್ಲಿ ಮಳೆಯಾಗದೇ ಇರುವದರಿಂದ ಅನೇಕ ಬೆಳೆಗಳು ಒಣಗಿ ಹೋಗುತ್ತಿವೆ. ಇದರಿಂದ ರೈತರು ಸಂಕಷ್ಟದಲ್ಲಿದ್ದು, ಇನ್ನೊಂದು ವಾರದೊಳಗೆ ಮಳೆಯಾಗದಿದ್ದರೆ ಪರಿಸ್ಥಿತಿ ಮತ್ತಷ್ಟು ಉಲ್ಬಣಗೊಳ್ಳುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಗೋಕಾಕ ಮತ್ತು ಮೂಡಲಗಿ ತಾಲೂಕುಗಳನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಸರ್ಕಾರಕ್ಕೆ ಮನವಿ ಮಾಡಿಕೊಳ್ಳಲಾಗುವುದು ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. …

Read More »

ವಿಕಲಚೇತನ ಫಲಾನುಭವಿಗಳಿಗೆ ಗುರುತಿನ ಯುಡಿಐಡಿ ಕಾರ್ಡ ವಿತರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ

  *ಮೂಡಲಗಿ* : ವಿಕಲಚೇತನ ಗುರುತಿನ ಯುಡಿಐಡಿ ಕಾರ್ಡ ದೇಶಾದ್ಯಂತ ಅಂಗವೈಕಲ್ಯತೆಯ ಪುರಾವೆಯಾಗಿ ಪರಿಗಣಿಸಲಾಗುತ್ತಿದ್ದು, ವಿಕಲಚೇತನರಿಗೆ ಸರ್ಕಾರದ ವಿವಿಧ ಯೋಜನೆಗಳಾದ ವಿದ್ಯಾರ್ಥಿ ವೇತನ, ಕೌಶಲ್ಯ ತರಬೇತಿ, ಸಮನ್ವಯ ಶಿಕ್ಷಣ, ಪುನರ್ವಸತಿ ಯೋಜನೆ, ಪಿಂಚಣಿ, ರೈಲ್ವೆ ರಿಯಾಯತಿ ಮುಂತಾದ ಸೌಲಭ್ಯಗಳನ್ನು ಪಡೆಯಲು ಯುಡಿಐಡಿ ಕಾರ್ಡ ಪೂರಕವಾಗುತ್ತದೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಪಟ್ಟಣದ ತಹಶೀಲ್ದಾರ ಕಛೇರಿಯಲ್ಲಿ ಆರೋಗ್ಯ ಇಲಾಖೆಯಿಂದ ಜರುಗಿದ ವಿಕಲಚೇತನರಿಗೆ ವಿಶಿಷ್ಟ ಗುರುತಿನ ಚೀಟಿ(ಯುಡಿಐಡಿ) ವಿತರಿಸಿ ಮಾತನಾಡಿದ ಅವರು, …

Read More »

ವೀರಯೋಧರ ಬಗ್ಗೆ ಹೆಮ್ಮೆ ಪಡೋಣ- ಶಾಸಕ ಬಾಲಚಂದ್ರ ಜಾರಕಿಹೊಳಿ

  *ಮೂಡಲಗಿ*: ನಮ್ಮ ರಾಷ್ಟ್ರದ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರಕ್ಕಾಗಿ ಹುತಾತ್ಮರಾದ ವೀರಯೋಧರನ್ನು ಗೌರವಿಸಲು ಇಡೀ ರಾಷ್ಟ್ರಾಧ್ಯಂತ ನಮ್ಮ ನೆಲ, ನಮ್ಮ ದೇಶ ಅಭಿಯಾನಕ್ಕೆ ಕರೆ ನೀಡಿದ್ದು, ಪ್ರತಿಯೊಬ್ಬ ಭಾರತೀಯನು ನಮ್ಮ ಯೋಧರ ಬಗ್ಗೆ ಅಭಿಮಾನ ಮತ್ತು ಗೌರವವನ್ನು ಹೊಂದಬೇಕೆಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ತಾಲೂಕಿನ ರಾಜಾಪೂರ ಗ್ರಾಮದ ಸರಕಾರಿ ಮಾಧ್ಯಮಿಕ ಶಾಲೆಯಲ್ಲಿ ಜರುಗಿದ ನಮ್ಮ ನೆಲ, ನಮ್ಮ ದೇಶ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ …

Read More »

ಮಹಾನ್ ಪುರುಷರನ್ನು ಒಂದೇ ಸಮುದಾಯಕ್ಕೆ ಸೀಮಿತಗೊಳಿಸಬೇಡಿ : ಶಾಸಕ ಬಾಲಚಂದ್ರ ಜಾರಕಿಹೊಳಿ

*ಮೂಡಲಗಿ* : ಸಂತ ಶ್ರೇಷ್ಠ ಕನಕದಾಸ ಮತ್ತು ಶೂರ ಸಂಗೊಳ್ಳಿ ರಾಯಣ್ಣನಂತಹ ಅಪ್ರತಿಮ ಸಾಧಕರನ್ನು ಪಡೆದಿರುವುದು ಹಾಲುಮತ ಸಮಾಜದ ಸೌಭಾಗ್ಯವಾಗಿದೆ. ಆದರೂ ಇಂತಹ ಮಹಾನ್ ಪುರುಷರನ್ನು ಕೇವಲ ಒಂದೇ ಸಮುದಾಯಕ್ಕೆ ಸೀಮಿತಗೊಳಿಸದೇ ಎಲ್ಲ ಸಮಾಜಗಳು ಇವರ ತತ್ವಾದರ್ಶಗಳನ್ನು ಪಾಲನೆ ಮಾಡಬೇಕಾದ ಅಗತ್ಯವಿದೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ತಾಲೂಕಿನ ರಾಜಾಪೂರ ಗ್ರಾಮದಲ್ಲಿ ಮಂಗಳವಾರದಂದು ಜರುಗಿದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಜಯಂತ್ಯೋತ್ಸವ ಹಾಗೂ ವಿಶ್ವಜ್ಯೋತಿ ಕನಕದಾಸರ ನೂರೆಂಟು ನಾಮಾವಳಿಯ …

Read More »

ಜಾರಕಿಹೊಳಿ ಸಹೋದರರ ನೇತೃತ್ವದಲ್ಲಿ ಎಲ್ಲ ಸ್ಥಾನಗಳಿಗೂ ಅವಿರೋಧ ಆಯ್ಕೆ

ಗೋಕಾಕ : ದಿ.ಗೋಕಾಕ ತಾಲೂಕಾ ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕಿನ ನೂತನ ಅಧ್ಯಕ್ಷರಾಗಿ ಜಾರಕಿಹೊಳಿ ಸಹೋದರರ ನೇತೃತ್ವದ ಗುಂಪಿನ ಮಸಗುಪ್ಪಿಯ ಅಪ್ಪಯ್ಯಾ ನಿಂಗಪ್ಪ ಬಡನಿಂಗಗೋಳ ಮತ್ತು ಉಪಾಧ್ಯಕ್ಷರಾಗಿ ರಾಜಾಪೂರದ ರಾಜು ಸತ್ತೆಪ್ಪ ಬೈರುಗೋಳ ಅವರು ಅವಿರೋಧವಾಗಿ ಪುನರಾಯ್ಕೆಯಾಗಿದ್ದಾರೆ. ಗುರುವಾರದಂದು ಇಲ್ಲಿನ ಬ್ಯಾಂಕಿನ ಸಭಾಗೃಹದಲ್ಲಿ ನಡೆದ ಆಡಳಿತ ಮಂಡಳಿಯ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆಯಲ್ಲಿ ತಲಾ ಒಂದೊಂದು ನಾಮಪತ್ರಗಳು ಸಲ್ಲಿಕೆಯಾಗಿದ್ದರಿಂದ ಈ ಎರಡೂ ಸ್ಥಾನಗಳಿಗೆ ಅವಿರೋಧವಾಗಿ ಆಯ್ಕೆ ನಡೆಯಿತು ಎಂದು …

Read More »

“ಮಧುರವೀ ಸ್ನೇಹ”

“ಮಧುರವೀ ಸ್ನೇಹ”” ಸ್ನೇಹದ ಸವಿನೆನಪುಗಳು ಸುಂದರ ಮೊಗೆದಷ್ಟು ಅದು ತುಂಬುವ ಸಾಗರ ಬಾಲ್ಯದ ನೆನಪ ಬುತ್ತಿಯ ಬಿಚ್ಚೋಣ ಬನ್ನಿ ಸ್ನೇಹ ಸುಧೆಯ ಹಂಚಿ ನಲಿಯೋಣ ಇರಬೇಕು ಬಾಳಲಿ ಮಧುರ ಗೆಳೆತನವೊಂದು ಮರುಭೂಮಿಯಲಿ ಅದುವೇ ಅಮೃತಬಿಂದು ಗೆಳೆತನವು ಆ ದೈವ ತಂದ ವರದಾನ ಸನ್ಮಿತ್ರರೊಳಗೆ ನೀ ತೋರದಿರು ಬಿಗುಮಾನ ಸ್ನೇಹದ ಕಡಲಲಿ ಮಿಂದೇಳಲಿ ಮನ ಸ್ನೇಹ ಸುಮ ಸೌಗಂಧ ಬೀರಲಿ ಅನುದಿನ ಪ್ರತಿ ಹೃದಯಕೂ ಸ್ನೇಹ ಸೇತುವೆ ಕಟ್ಟೋಣ ನಂಬಿಕೆಯ ಅಡಿಪಾಯದ …

Read More »

ವಿದಾಯ

ಕಾಡುವ ಮಾತುಗಳ ಮೆರವಣಿಗೆಯಲಿ ನನ್ನ ಮನ ನಿನಗಾಗಿ ಮತ್ತೆ ಪಲ್ಲವಿಸಿದೆ ನನ್ನಂತರಾಳ ಮಾರ್ದನಿಸುತಿದೆ ನಿನ್ನ ನೆನಪು ಬಹುವಾಗಿ ಮುತ್ತಲು ನನ್ನ ಮನ ಹುಣ್ಣಿಮೆ ಚಂದಿರನಂತೆ ಮುಗಿಲ ತೊಟ್ಟಿಲಿನ ನಿನ್ನ ಮಡಿಲಲ್ಲಿ ಮಲಗಿದೆ ಮೌನ ದಾಟಿ ತೆಪ್ಪಗಿರದ ಕನಸುಗಳು ಆಗಾಗ ಬೇಯುತ್ತಿವೆ ಒಡಲ ಕಿಚ್ಚಿನೊಳಗೆ ಮೌನದ ಮರೆಯಲಿ ನಿಂತು ಮತ್ತೆ ನಿನ್ನ ನೆನಪಿಸಿಕೊಳ್ಳುತ್ತಿವೆ ನಿನಗೆ ವಿದಾಯ ಹೇಳಲಾಗದೆ….. ಆ ದಿನವೊಂದನು ಕಾಯುತ್ತೇನೆ ಚಿಂತೆ ಬಿಡು ನಾ ಮುಡಿದ ಮಲ್ಲಿಗೆಯದು     …

Read More »

ಗ್ರಾಮ ಒನ್ ಐಡಿ ರದ್ದುಗೊಳಿಸಿ ಕ್ರಮ : ಲಕ್ಷ್ಮೀ ಹೆಬ್ಬಾಳಕರ್

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಶೂರ್ಪಾಲಿ ಗ್ರಾಮದಲ್ಲಿ ಗ್ರಾಮ ಒನ್ ಸಿಬ್ಬಂದಿ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆಗೆ ಹಣ ಪಡೆದಿದ್ದಾರೆ ಎಂದು ಸಾರ್ವಜನಿಕರಿಂದ ದೂರು ಬಂದ ಹಿನ್ನೆಲೆಯಲ್ಲಿ ಗ್ರಾಮ ಒನ್ ಸಿಬ್ಬಂದಿಯ ಲಾಗಿನ್ ಐಡಿ ರದ್ದುಗೊಳಿಸಿ ಕ್ರಮ ಕೈಗೊಳ್ಳಲಾಗಿದೆ. ಸರಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿರುವ ಗೃಹಲಕ್ಷ್ಮೀ ಯೋಜನೆಯಲ್ಲಿ ಯಾವುದೇ ರೀತಿಯ ಅವ್ಯವಹಾರ, ಅಕ್ರಮವನ್ನು ಸರಕಾರ ಸಹಿಸುವುದಿಲ್ಲ. ಅಂತವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುವುದಕ್ಕೂ ಹಿಂಜರಿಯುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ …

Read More »

ತಾಲೂಕಾ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ: ಮನವಿ

  ಮೂಡಲಗಿ: ಬಿಎಲ್‍ಒ, ಬಿಆರ್‍ಪಿ, ಸಿಆರ್‍ಪಿಗಳಿಗೆ ರಜೆ ಅವಧಿಯಲ್ಲಿ ಕಾರ್ಯ ನಿರ್ವಹಿಸಿದವರಿಗೆ ಗಳಿಕೆ ರಜೆ ಮಂಜೂರಿ, 50 ವರ್ಷ ಮೇಲ್ಪಟ್ಟ, ಅಂಗವಿಕಲ, ಅನಾರೋಗ್ಯ ಪೀಡಿತ ಶಿಕ್ಷಕರಿಗೆ ಬಿ.ಎಲ್.ಒ ಕಾರ್ಯದಿಂದ ಕೈಬೀಡುವದು, ಪಿಎಸ್‍ಟಿ ಶಿಕ್ಷಕರಿಗೆ ಪದವಿಧರರಿಗೆ ಜಿಪಿಟಿ ಶಿಕ್ಷಕರಾಗಿ ಬಡ್ತಿಯೊಂದಿಗೆ ವಿಲೀನಗೋಳಿಸುವದು, ವರ್ಗಾವಣೆಗೊಂಡ ಶಿಕ್ಷಕರಿಗೆ ತ್ವರಿತಗತಿಯಲ್ಲಿ ಚಾಲನಾ ಆದೇಶಗಳನ್ನು ನೀಡುವಂತೆ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ತಾಲೂಕಾ ಘಟಕದಿಂದ ಸಾಮಾನ್ಯ ಸಭೆಯಲ್ಲಿ ಚರ್ಚಿಸಿ ಮೂಡಲಗಿ ತಹಶೀಲ್ದಾರ ಶಿವಾನಂದ ಬಬಲಿ …

Read More »