Breaking News

Ad9 News

ಶ್ರೀ ಅವಧೂತ ಗಾಳೇಶ್ವರ ಮಹಾಸ್ವಾಮಿಗಳ 79ನೇ ಪುಣ್ಯಾರಾಧನೆ ನಿಮಿತ್ಯ ರಥೋತ್ಸವ

  ತೊಂಡಿಕಟ್ಟಿ: ರಾಮದುರ್ಗ ತಾಲೂಕಿನ ಸುಕ್ಷೇತ್ರ ತೊಂಡಿಕಟ್ಟಿ ಗ್ರಾಮದಲ್ಲಿ ಶ್ರೀ ಅವಧೂತ ಗಾಳೇಶ್ವರ ಮಹಾಸ್ವಾಮಿಗಳ 79ನೇ ಪುಣ್ಯಾರಾಧನೆ ನಿಮಿತ್ಯ ರಥೋತ್ಸವ ಅಪಾರ ಜನ ಸಾಗರದ ಜಯಘೋಷಣೆಯೊಂದಿಗೆ ಶ್ರೀ ಮಠದ ಪೀಠಾಧಿಪತಿ ಶ್ರೀ ಅಭಿನವ ವೆಂಕಟೇಶ ಮಹಾರಾಜರ ಸಾನ್ನಿಧ್ಯದಲ್ಲಿ ಸಡಗರ ಸಂಭ್ರಮದಿಂದ ಜರುಗಿತು. ಪ್ರತಿ ವರ್ಷ ಏಳ್ಳ ಅಮವಾಸ್ಯೆ ದಿನದಿಂದ ಐದು ದಿನಗಳ ಕಾಲ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯು ಜಾತ್ರಾ ಮಹೋತ್ಸವ ಶುಕ್ರವಾರ ಎರಡನೇ ದಿನದಂದು ಸಂಜೆ ಗಾಳೇಶ್ವರ ರಥೋತ್ಸಕ್ಕೆ …

Read More »

ಮಕ್ಕಳಲ್ಲಿ ಉತ್ತಮ ಪರಿಸರ, ವಾತಾವರಣವನ್ನು ನಿರ್ಮಿಸುವಲ್ಲಿ ಶೈಕ್ಷಣಿಕ ಪ್ರವಾಸ ಉತ್ತಮ ಅಡಿಪಾಯವಾಗಿದೆ: ಯುವ ಧುರೀಣ ಸರ್ವೋತ್ತಮ ಜಾರಕಿಹೊಳಿ

ಗೋಕಾಕ್- ಮಕ್ಕಳಿಗೆ ರಾಜ್ಯದ ನೆಲ,ಜಲ, ಇತಿಹಾಸ, ಪರಂಪರೆ ಹಾಗೂ ಸಂಸ್ಕೃತಿಯನ್ನು ಪರಿಚಯಿಸಲು ಕರ್ನಾಟಕ ದರ್ಶನದಂತಹ ಶೈಕ್ಷಣಿಕ ಪ್ರವಾಸ ಮಹತ್ತರ ಪಾತ್ರ ವಹಿಸುತ್ತದೆ ಎಂದು ಯುವ ಧುರೀಣ ಸರ್ವೋತ್ತಮ ಜಾರಕಿಹೊಳಿ ಹೇಳಿದರು. ಶುಕ್ರವಾರ ಇಲ್ಲಿಯ ಎನ್ಎಸ್ಎಫ್ ಕಾರ್ಯಾಲಯದ ಆವರಣದಲ್ಲಿ ಮೂಡಲಗಿ ವಲಯದ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಹಮ್ಮಿಕೊಂಡ ಶೈಕ್ಷಣಿಕ ಪ್ರವಾಸ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಮಕ್ಕಳಲ್ಲಿ ಉತ್ತಮ ಪರಿಸರ, ವಾತಾವರಣವನ್ನು ನಿರ್ಮಿಸುವಲ್ಲಿ ಶೈಕ್ಷಣಿಕ ಪ್ರವಾಸ ಉತ್ತಮ ಅಡಿಪಾಯವಾಗಿದೆ ಎಂದು …

Read More »

ತೊಂಡಿಕಟ್ಟಿ: ಜ.12ರಂದು ಸಂಗೀತ ಸಂಭ್ರಮ ಕಾರ್ಯಕ್ರಮ

ತೊಂಡಿಕಟ್ಟಿ: ರಾಮದುರ್ಗ ತಾಲೂಕಿನ ತೊಂಡಿಕಟ್ಟಿ ಗ್ರಾಮದಲ್ಲಿ ಶ್ರೀ ಅವಧೂತ ಗಾಳೇಶ್ವರ ಜಾತ್ರಾಮಹೋತ್ಸವ ಅಂಗವಾಗಿ ಗ್ರಾಮದ ಶ್ರೀ ಗಾಳೇಶ್ವರ ತರುಣ ನಾಟ್ಯ ಸಂಘ ಮತ್ತು ಜೈ ಹನುಮಾನ ಯುವಕ ಮಂಡಳ ಆಶ್ರಯದಲ್ಲಿ ಶುಕ್ರವಾರ ಜ.12 ರಂದು ರಾತ್ರಿ 10=30ಕ್ಕೆ ಹುಬ್ಬಳ್ಳಿ ಸಿಂಗಿAಗ್ ಸ್ಟಾರ್ ಮೆಲೋಡಿಸ್ ಆರ್ಕೆಸ್ಟಾçದಿಂದ ಸಂಗೀತ ಸಂಭ್ರಮ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಏರ್ಪಡಿಸಲ್ಲಾಗಿದೆ ಎಂದು ಸಂಘಟಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ. ಸಮಾರಂಭ ಸಾನ್ನಿಧ್ಯವನ್ನು ಅವಧೂತ ಗಾಲೇಶ್ವರ ಮಠದ ಶ್ರೀ ವೆಂಕಟೇಶ …

Read More »

ಇಂದಿನಿಂದ ತೊಂಡಿಕಟ್ಟಿ ಗಾಳೇಶ್ವರ ಜಾತ್ರಾಮಹೋತ್ಸವ ಆರಂಭ

ತೊಂಡಿಕಟ್ಟಿ: ರಾಮದುರ್ಗ ತಾಲೂಕಿನ ಸುಕ್ಷೇತ್ರ ತೊಂಡಿಕಟ್ಟಿ ಗ್ರಾಮದಲ್ಲಿ ಶ್ರೀ ಅವಧೂತ ಗಾಳೇಶ್ವರ ಮಹಾಸ್ವಾಮಿಗಳ 79ನೇ ಪುಣ್ಯಾರಾಧನೆ ಹಾಗೂ ಬ್ರಹ್ಮೈಕ್ಯ ಶ್ರೀ ಪುಂಡಲೀಕ ಮಹಾರಾಜರ 84 ನೇ ಹುಟ್ಟು ಹಬ್ಬದ ಮತ್ತು ಕಿರೀಟ ಪೂಜಾ ಕಾರ್ಯಕ್ರಮ ಜ.೧೧ ರಿಂದ ೧೫ ರವರಿಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಶ್ರೀ ಅವಧೂತ ಗಾಳೇಶ್ವರ ಮಠದ ಪೀಠಾಧಿಪತಿ ಶ್ರೀ ಅಭಿನವ ವೇಂಕಟೇಶ್ವರ ಮಹಾರಾಜರ ಸಾನ್ನಿಧ್ಯದಲ್ಲಿ ಸಡಗರ ಸಂಭ್ರಮದಿಂದ ಜರುಗಲಿದೆ. ಜ.11 ರಂದು ಬೆಳಿಗ್ಗೆ ಕರ್ತೃ ಗದ್ದುಗೆಗಳಿಗೆ …

Read More »

ಮಕ್ಕಳಿಗೆ ಮೌಲ್ಯಯುತ ಶಿಕ್ಷಣ ಕೊಡಿಸಿ: ಡಾ. ಭೀಮಾಶಂಕರ ಎಸ್ ಗುಳೇದ

  ರಾಯಬಾಗ: ಮಕ್ಕಳಿಗೆ ಮೌಲ್ಯಯುತ ಶಿಕ್ಷಣ ಕೊಡಿಸುವುದರ ಮೂಲಕ ಆದರ್ಶ ವ್ಯಕ್ತಿಗಳನ್ನಾಗಿ ರೂಪಿಸಿ ಎಂದು ಬೆಳಗಾವಿ ಎಸ್ ಪಿ . ಭೀಮಾಶಂಕರ ಎಸ್ ಗುಳೇದ ಅವರು ಅಭಿಪ್ರಾಯಪಟ್ಟರು. ರಾಯಬಾಗ ತಾಲೂಕಿನ ಇಟ್ನಾಳ ಗ್ರಾಮದ ಶಾಂತಿ ಶಿಕ್ಷಣ ಸಂಸ್ಥೆಯ ವಿದ್ಯಾಚೇತನ ರೆಸಿಡೆನ್ಸಿಯಲ್ ಶಾಲೆಯ ನೂತನ ಕೊಠಡಿಯ ಉದ್ಘಾಟನೆ ಹಾಗೂ ರತ್ನವ್ವ ಅಪ್ಪಯ್ಯ ತೇರದಾಳ ದಂಪತಿಗಳ 50ನೇ ವಿವಾಹ ವಾರ್ಷಿಕೋತ್ಸವ ಸಮಾರಂಭ ಉದ್ಘಾಟಿಸಿ ಮಾತನಾಡಿ.       ನಾನು ಕೂಡ ಗ್ರಾಮೀಣ …

Read More »

ಯಾದವಾಡದಲ್ಲಿ ಕಾರ್ತಿಕೋತ್ಸವದ ನಿಮುತ್ಯ ಜ.6 ರಂದು ಶಿರಕೋಳ ಶಿವಾಚಾರ್ಯರಿಂದ ಆಧ್ಯಾತ್ಮೀಕ ಪ್ರವಚನ*

  ಮೂಡಲಗಿ: ತಾಲೂಕಿನ ಯಾದವಾಡ ಗ್ರಾಮದ ಪೇಟೆ ಓಣಿಯ ಶ್ರೀ ಹನುಮಾನ ಮಂದಿರದಲ್ಲಿ ಕಾರ್ತಿಕೋತ್ಸವದ ಅಂಗವಾಗಿ ಜನವರಿ 6 ರಂದು ಬೆಳಿಗ್ಗೆ 11 ಗಂಟೆಗೆ ಆಧ್ಯಾತ್ಮೀಕ ಪ್ರವಚನ ಆಯೋಜಿಸಲಾಗಿದೆ ಎಂದು ಸಂಘಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಆಧ್ಯಾತ್ಮೀಕ ಪ್ರವಚನವನ್ನು ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಶಿರಕೋಳ ಹಿರೇಮಠದ ಪಟ್ಟಾಧ್ಯಕ್ಷರಾದ ಷ.ಬ್ರ. ಗುರುಸಿದ್ದೇಶ್ವರ ಶಿವಾಚಾರ್ಯ ಸ್ವಾಮಿಗಳು ನೀಡಲಿದ್ದಾರೆ. ಶ್ರೀ ಕಾಶಿ ಕ್ಷೇತ್ರದಲ್ಲಿ ಶಾಸ್ತ್ರ,ವೇದಾಧ್ಯಯನ ಮಾಡಿರುವ ಶ್ರೀಗಳು ಧಾರ್ಮಿಕ ಪ್ರವಚನಗಳಲ್ಲಿ ಪ್ರಸಿದ್ದರು. ಯಾದವಾಡ ಪಟ್ಟಣದ …

Read More »

ಹೊಸ ವರುಷವು ಎಲ್ಲರಿಗೂ ಸಂಭ್ರಮೊಲ್ಲಾಸ ತರಲಿ- ಶಾಸಕ ಬಾಲಚಂದ್ರ ಜಾರಕಿಹೊಳಿ ಶುಭಾಶಯ

ನಮ್ಮ ಕನಸುಗಳನ್ನು ಸಾಕಾರಗೊಳಿಸೋಣ *ಗೋಕಾಕ-* ಅರಭಾವಿ ಶಾಸಕ ಹಾಗೂ ಕೆಎಂಎಫ್ ನಿರ್ದೇಶಕ ಬಾಲಚಂದ್ರ ಜಾರಕಿಹೊಳಿ ಅವರು ನಾಡಿನ ಸಮಸ್ತ ಜನತೆಗೆ ಹೊಸ ವರ್ಷದ ಶುಭಾಶಯಗಳನ್ನು ಕೋರಿದ್ದಾರೆ. ಹೊಸ ಚೈತನ್ಯದೊಂದಿಗೆ 2024 ರ ಹೊಸ ವರ್ಷವನ್ನು ಸಡಗರದಿಂದ ಬರಮಾಡಿಕೊಳ್ಳೋಣ. ಕಳೆದಿರುವ ಕೆಲವು ಕಹಿ ಘಟನೆಗಳನ್ನು ಮರೆತು ಪರಸ್ಪರ ಪ್ರೀತಿ, ವಿಶ್ವಾಸದೊಂದಿಗೆ ಪ್ರತಿಯೊಂದರಲ್ಲಿಯೂ ಸಾಮರಸ್ಯವನ್ನು ಮೂಡಿಸುವ ಕೆಲಸ ಮಾಡೋಣ. ಬರಗಾಲಕ್ಕೆ ತತ್ತರಿಸಿರುವ ನೇಗಿಲಯೋಗಿಯ ಬಾಳು ಈ ಬಾರಿಯಾದರೂ ಬಂಗಾರವಾಗಲಿ. ಹೊಸ ವರುಷ ಎಲ್ಲರಿಗೂ …

Read More »

ದಿ. ನಾಗಪ್ಪ ಶೇಖರಗೋಳ ಅವರ ಭಾವಚಿತ್ರಕ್ಕೆ ಪುಷ್ಪಸಮರ್ಪಣೆ ಹಾಗೂ ದೀಪ ಬೆಳಗಿಸುವ ಮೂಲಕ ಶೃದ್ಧಾಂಜಲಿ

ಮೂಡಲಗಿ: ಪಟ್ಟಣದ ಕಲ್ಮೇಶ್ವರ ವೃತ್ತದಲ್ಲಿ ಜರುಗಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಆಪ್ತ ಸಹಾಯಕರಾದ ದಿ. ನಾಗಪ್ಪ ಶೇಖರಗೋಳ ಅವರ ಭಾವಚಿತ್ರಕ್ಕೆ ಪುಷ್ಪಸಮರ್ಪಣೆ ಹಾಗೂ ದೀಪ ಬೆಳಗಿಸುವ ಮೂಲಕ ಶೃದ್ಧಾಂಜಲಿಯನ್ನು ಬಾಲಚಂದ್ರ ಜಾರಕಿಹೊಳಿ ಅವರು ಅಭಿಮಾನಿ ಬಳಗದವನ್ನು ಸಲ್ಲಿಸಿದರು. ಈ ವೇಳೆ ಮಾತನಾಡಿದ…ಎಡ್ವಿನ್ ಪರಸನ್ನವರ ನಾಗಪ್ಪ ಅವರು ಅರಭಾವಿ ಕ್ಷೇತ್ರದ ಸಂಪೂರ್ಣ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸಿದ್ದರು. ಜನರ ಕಷ್ಟಗಳಿಗೆ ತಕ್ಷಣವೇ ಶಾಸಕರ ಗಮನಕ್ಕೆ ತಂದು ಸಾರ್ವಜನಿಕರ ಕಷ್ಟಗಳಿಗೆ ಸ್ಪಂದಿಸಿ ಧೈರ್ಯ ತುಂಬುತ್ತಿದ್ದರು. …

Read More »

ದಿ.ನಾಗಪ್ಪ ಶೇಖರಗೋಳ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ವಿ.ಪ ಸದಸ್ಯ ಲಖನ್ ಜಾರಕಿಹೊಳಿ, ಸರ್ವೋತ್ತಮ ಜಾರಕಿಹೊಳಿ, ರಾಹುಲ ಜಾರಕಿಹೊಳಿ ಸೇರಿದಂತೆ ಶ್ರದ್ಧಾಂಜಲಿ ಸಭೆಯಲ್ಲಿ ಹಲವರು ಭಾಗಿ ಗೋಕಾಕ : ನಮ್ಮ ಕುಟುಂಬವು ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ಕ್ಷೇತ್ರಗಳಲ್ಲಿ ಗಣನೀಯ ಪ್ರಗತಿ ಕಾಣಲಿಕ್ಕೆ ಹಲವು ಮಹನೀಯರು ಸೇವೆ ಸಲ್ಲಿಸಿದ್ದಾರೆ. ನಮ್ಮ ಕುಟುಂಬದ ಸಾಮ್ರಾಜ್ಯದಲ್ಲಿ ದಿ. ನಾಗಪ್ಪ ಶೇಖರಗೋಳ ಪಾತ್ರವೂ ಇದೆ. ವಿಧಿಯಾಟದ ಮುಂದೆ ಯಾರೂ ದೊಡ್ಡವರಲ್ಲ. ಅಗಲಿರುವ ನಾಗಪ್ಪನ ಆತ್ಮಕ್ಕೆ ದೇವರು ಚಿರಶಾಂತಿ ನೀಡಲಿ. ಮೃತರ ಕುಟುಂಬಕ್ಕೆ ದುಃಖವನ್ನು …

Read More »

ನಮ್ಮ ಕುಟುಂಬದ ಮೇಲಿಟ್ಟಿರುವ ಪ್ರೀತಿ, ವಿಶ್ವಾಸಗಳಿಗೆ ಸದಾ ಚಿರ ಋಣಿ; ಯುವ ನಾಯಕ ರಾಹುಲ್‌ ಜಾರಕಿಹೊಳಿ

ಗೋಕಾಕ- ಕೇವಲ ಸಂಪತ್ತು ಗಳಿಸಿದರೆ ಶ್ರೀಮಂತ ಎನಿಸಿಕೊಳ್ಳುವುದಿಲ್ಲ. ಬಡವರ ಕಷ್ಟ- ಕಾರ್ಪಣ್ಯಗಳಿಗೆ ಸ್ಪಂದಿಸುವ ವಿಶಾಲ ಹೃದಯ ಮುಖ್ಯವಾಗಿರುತ್ತದೆ. ನಮ್ಮ ಕುಟುಂಬದ ಮೇಲಿಟ್ಟಿರುವ ಪ್ರೀತಿ, ವಿಶ್ವಾಸಗಳಿಗೆ ಸದಾ ಚಿರ ಋಣಿಯಾಗಿರುವುದಾಗಿ ಯುವ ನಾಯಕ ರಾಹುಲ್‌ ಜಾರಕಿಹೊಳಿ ಹೇಳಿದರು. ಇಲ್ಲಿಯ ಎನ್ ಎಸ್ ಎಫ್ ಕಚೇರಿಯಲ್ಲಿ ತಾಲ್ಲೂಕು ಕ್ರೈಸ್ತ ಸಮುದಾಯವರು ಹಮ್ಮಿಕೊಂಡ ಕ್ರಿಸ್ಮಸ್ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ನಮಗೆ ಎಲ್ಲ ಜಾತಿಯ, ವಿವಿಧ ಧರ್ಮೀಯರು ಬೆನ್ನೆಲುಬಾಗಿ ನಿಂತಿದ್ದಾರೆ. ನಾವು ಮಾಡುತ್ತಿರುವ …

Read More »