Breaking News

Ad9 News

ಶಾಸಕ ರಮೇಶ ಜಾರಕಿಹೊಳಿ ಅವರ ಅಭಿಮಾನಿಗಳು ನಗರದಲ್ಲಿ ಪ್ರತಿಭಟನೆ

ಗೋಕಾಕ: ಮಾಜಿ ಸಚಿವ ರಮೇಶ ಜಾರಕಿಹೊಳಿ ಅವರ ವಿರುದ್ಧ ವ್ಯವಸ್ಥಿತ ಷಡ್ಯಂತ್ರ ಹಿಂದೆ ಇರುವವರನ್ನು ಪತ್ತೆಹಚ್ಚಿ ಕೂಡಲೇ ಬಂಧಿಸುವಂತೆ ಆಗ್ರಹಿಸಿ ರಮೇಶ ಜಾರಕಿಹೊಳಿ ಅಭಿಮಾನಿಗಳು ರವಿವಾರದಂದು ನಗರದ ಬಸವೇಶ್ವರ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಬೃಹತ್ ಪ್ರತಿಭಟನೆ ನಡೆಸಿದರು. ಇದೇ ಸಂದರ್ಭದಲ್ಲಿ ಮುಖಂಡ ಭೀಮಶಿ ಭರಮಣ್ಣವರ ಮಾತನಾಡಿ, ಸಾಹುಕಾರ್ ರಮೇಶ ಜಾರಕಿಹೊಳಿ ವಿರುದ್ಧ ಷಡ್ಯಂತ್ರ ಮಾಡಿರುವವನು ಮಹಾನಾಯಕ ಅಲ್ಲ ಅವನು ಕಳನಾಯಕ ಎಂದು ಆಕ್ರೋಶ ವ್ಯಕ್ತಪಡಿಸಿದರು. ರಮೇಶ ಜಾರಕಿಹೊಳಿ ಅವರು …

Read More »

ಈ ಮರದ ಸಲುವಾಗಿ ವರ್ಷಕ್ಕೆ ಖರ್ಚು ಮಾಡಲಾಗುತ್ತದೆ 15 ಲಕ್ಷ ರೂಪಾಯಿ; ದಿನದ 24 ಗಂಟೆಯೂ ಇರುತ್ತೆ ಟೈಟ್ ಸೆಕ್ಯುರಿಟಿ!

ನಮ್ಮ ದೇಶದಲ್ಲಿ ಎಲ್ಲಕ್ಕೂ ಹೆಚ್ಚು ಸಂರಕ್ಷಣೆ ರಾಜಕಾರಣಿಗಳಿರುತ್ತೆ ಅಲ್ವಾ? ಈ ವಿಷಯ ಎಲ್ಲರಿಗೂ ಗೊತ್ತು. ಇದನ್ನು ಬಿಟ್ಟು ನಮ್ಮ ರಕ್ಷಣೆ ಮಾಡುವ ಸೈನಿಕರು ದೇಶಕ್ಕಾಗಿ ಹಗಲು ರಾತ್ರಿ ಎನ್ನದೆ ಒಂದೇ ಸಮನೆ ಗಡಿಯಲ್ಲಿ ಕಣ್ಣಲ್ಲಿ ಎಣ್ಣೆ ಹಾಕಿಕೊಂಡು ಗಸ್ತು ಹೊಡೆಯುತ್ತಿರುತ್ತಾರೆ. ಇನ್ನು ಕೆಲವು ಮಹತ್ವದ ವ್ಯಕ್ತಿಗಳಿಗಂತೂ ಅಭೂತಪೂರ್ವ ಭದ್ರತೆಯನ್ನು ಒದಗಿಸಲಾಗುತ್ತದೆ, ಹಾಗೂ ಇದಕ್ಕೆ ಸಾಕಷ್ಟು ಹಣವನ್ನು ಸಹಿತ ಖರ್ಚು ಮಾಡಲಾಗುತ್ತದೆ. ಇವೆಲ್ಲದರ ಹೊರತಾಗಿ ನಮ್ಮ ದೇಶದಲ್ಲಿ ಒಂದು ಮರವಿದೆ. ಅದಕ್ಕೂ …

Read More »

ಜಾರಕಿಹೊಳಿ ಅವರ ವಿರುದ್ದ ಷಡ್ಯಂತ್ರ ಖಂಡಿಸಿ ಖಾನಟ್ಟಿಯಲ್ಲಿ ಪ್ರತಿಭಟನೆ

ಮೂಡಲಗಿ: ಮಾಜಿ ಸಚಿವ ರಮೇಶ ಜಾರಕಿಹೊಳಿ ಅವರ ವಿರುದ್ಧ ಷಡ್ಯಂತ್ರ ಖಂಡಿಸಿ ತಾಲೂಕಿನ ಖಾನಟ್ಟಿ ಗ್ರಾಮದಲ್ಲಿ ಗುರುವಾರದಂದು ಟೈಯರಿಗೆ ಬೆಂಕಿ ಹಚ್ಚಿ ಪ್ರತಿಭಟಿಸಿ ರಮೇಶ ಜಾರಕಿಹೊಳಿ ಅವರನ್ನು ಕೂಡಲೇ ಸಚಿವರನ್ನಾಗಿ ಮಾಡಬೇಕೆಂದು ಆಗ್ರಹಿಸಿ ಗ್ರಾ.ಪಂ ಪಿಡಿಒ ಹಣಮಂತ ಬಸಗುಂದಿ ಅವರ ಮೂಲಕ ಸರಕಾರಕ್ಕೆ ಮನವಿಸಲ್ಲಿಸಿದರು. ಈ ಸಂಧರ್ಭದಲ್ಲಿ ಶಿವನಪ್ಪ ಗುದಗನ್ನವರ, ವೆಂಕನಗೌಡ ಪಾಟೀಲ, ಬಸಲಿಂಗ ನಿಂಗನ್ನೂರ, ಚೇತನ ರಡ್ಡೇರಹಟ್ಟಿ, ಸುಭಾಸ ತುಪ್ಪದ, ಶಿವಬಸು ತುಪ್ಪದ, ರಾಮಪ್ಪ ಕುಂದರಗಿ, ರಮೇಶ ಮೇತ್ರಿ, …

Read More »

ಹಿಡಕಲ್ ಜಲಾಶಯದಿಂದ ನಾಳೆಯಿಂದ 15 ದಿನಗಳವರೆಗೆ 6.80 ಟಿಎಂಸಿ ನೀರು ಬಿಡುಗಡೆ : ಶಾಸಕ ಬಾಲಚಂದ್ರ ಜಾರಕಿಹೊಳಿ

ಹಿಡಕಲ್ ಜಲಾಶಯದಿಂದ ನಾಳೆಯಿಂದ 15 ದಿನಗಳವರೆಗೆ 6.80 ಟಿಎಂಸಿ ನೀರು ಬಿಡುಗಡೆ : ಶಾಸಕ ಬಾಲಚಂದ್ರ ಜಾರಕಿಹೊಳಿ ಜಿಎಲ್‍ಬಿಸಿಗೆ 2400 ಕ್ಯೂಸೆಕ್ಸ್, ಜಿಆರ್‍ಬಿಸಿಗೆ 2000 ಕ್ಯೂಸೆಕ್ಸ್ ಮತ್ತು ಸಿಬಿಸಿಗೆ 550 ಕ್ಯೂಸೆಕ್ಸ್ ನೀರು ಗೋಕಾಕ : ಹಿಡಕಲ್ ಜಲಾಶಯದಿಂದ ನಾಳೆಯಿಂದ 15 ದಿನಗಳವರೆಗೆ ರೈತರ ಕೃಷಿ ಜಮೀನುಗಳಿಗೆ ನೀರು ಹಾಯಿಸಲು 6.80 ಟಿಎಂಸಿ ನೀರು ಬಿಡುಗಡೆ ಮಾಡಲಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು …

Read More »

ಉತ್ತರ ಕರ್ನಾಟಕದ ಜನರ ಕಲೆಯ ಪ್ರೋತ್ಸಾಹ ಅನನ್ಯವಾಗಿದೆ

ಮೂಡಲಗಿ: ‘ಕಲಾಭೀಮಾನಿಗಳ ಪ್ರೀತಿ, ಪ್ರೋತ್ಸಾಹ ಇರುವವರೆಗೆ ಕಲಾವಿದರು ಬೆಳೆಯುತ್ತಾರೆ. ಉತ್ತರ ಕರ್ನಾಟಕದ ಜನರು ಕಲೆಗೆ ಕೊಡುವ ಪ್ರೋತ್ಸಾಹವು ಅನನ್ಯವಾಗಿದೆ’ ಎಂದು ಧಾರಾವಾಹಿ ನಟಿ ಮೋಕ್ಷಿತಾಗ ಪೈ (ಪಾರು) ಹೇಳಿದರು. ಅವರು ಮೂಡಲಗಿ ಪಟ್ಟಣದ ಶ್ರೀ ವೆಂಕಟೇಶ್ವರ ಚಿತ್ರಮಂದಿರದಲ್ಲಿ ಶನಿವಾರ ರಾತ್ರಿ ಜರುಗಿದ ನಾಟ್ಯ ರಾಣ ಜ್ಯೋತಿ ಬಳ್ಳಾರಿಯವರ ಶ್ರೀ ದುರ್ಗಾಶಕ್ತಿ ನಾಟ್ಯ ಸಂಸ್ಥೆ ಕಲಾವಿದರ ಸಹಾಯಾರ್ಥವಾಗಿ ಹಾಸ್ಯ ರಸಮಂಜರಿ ಕಾರ್ಯಕ್ರಮದಲ್ಲಿ ಮಾತನಾಡಿ, ಮೂಡಲಗಿ ಜನತೆ ಇಷ್ಟೊಂದು ಪ್ರೀತಿ ವಿಶ್ವಾಸ ತೋರಿಸದಕ್ಕೆ …

Read More »

ಮೂಡಲಗಿ, ಪಂಚಮಸಾಲಿ ಸಮಾಜ ಬಾಂದವರು 2ಎ ಮಿಸಲಾತಿ ನೀಡುವಂತೆ ತಹಶೀಲದಾರ ಡಿ ಜೆ ಮಹಾತ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು

ಮೂಡಲಗಿ : ಕರ್ನಾಟಕ ರಾಜ್ಯದಲ್ಲಿ ಕೃಷಿ ಕೂಲಿಕಾರರಾಗಿರುವ ಲಿಂಗಾಯತ ಪಂಚಮಸಾಲಿ ಸಮಾಜವು ಆರ್ಥಿಕವಾಗಿ, ಶೈಕ್ಷಣಿಕವಾಗಿ ಹಾಗೂ ಔದ್ಯೋಗಿಕವಾಗಿ ಅತ್ಯಂತ ಹಿಂದುಳಿದ ಸಮಾಜವಾಗಿದೆ ಎಂದು ಮೂಡಲಗಿ ತಾಲೂಕಾ ಪಂಚಮಸಾಲಿ ಲಿಂಗಾಯತ ಅಭಿವೃದ್ದಿ ಸಮಿತಿ ಅಧ್ಯಕ್ಷ ಬಸವರಾಜ ಪಾಟೀಲ ಹೇಳಿದರು. ಗುರುವಾರದಂದು ಪಂಚಮಸಾಲಿ ಸಮಾಜ ಬಾಂಧವರು ರಾಜ್ಯ ಸರ್ಕರದ 2ಎ ಹಾಗೂ ಲಿಂಗಾಯತ ಬಡ ಸಮಾಜಗಳಿಗೆ ಕೇಂದ್ರ ಒಬಿಸಿ ಮೀಸಲಾತಿಗಾಗಿ ಸರ್ಕಾರಕ್ಕೆ ಸೂಕ್ತ ನಿರ್ದೇಶನ ನೀಡುವಂತೆ ಒತ್ತಾಯಿಸಿ ತಹಶೀಲ್ದಾರ ಡಿ ಜೆ ಮಹಾತ …

Read More »

ಜಾರಕಿಹೊಳಿ ಅಭಿಮಾನಿ ಬಳಗದಿಂದ ಪ್ರತಿಭಟನೆ | ಬಾಲಚಂದ್ರ ಜಾರಕಿಹೊಳಿಯವರಿಗೆ ಸಚಿವಸ್ಥಾನ ನೀಡಿ ಸಿಡಿ ಬಗ್ಗೆ ಸಮಗ್ರ ತನಿಖೆಗೆ ಆಗ್ರಹಿಸಿ ಪ್ರತಿಭಟನೆ

ಮೂಡಲಗಿ : ರಮೇಶ ಜಾರಕಿಹೊಳಿಯವರ ನಕಲಿ ವಿಡಿಯೋ ಖಂಡಿಸಿ ಮೂಡಲಗಿ ತಾಲೂಕಾ ಜಾರಕಿಹೊಳಿ ಅಭಿಮಾನಿ ಬಳಗದಿಂದ ಮೂಡಲಗಿ ಪಟ್ಟಣದ ಕಲ್ಮೇಶ್ವರ ವೃತ್ತದಲ್ಲಿ ಟೈಯರ್‍ಗೆ ಬೆಂಕಿ ಹಚ್ಚಿ ರಮೇಶ ಜಾರಕಿಹೊಳಿ ವಿರುದ್ಧದ ಷಡ್ಯಂತ್ರ ಖಂಡಿಸಿ ಪ್ರತಿಭಟನೆ ನಡೆಸಿದರು. ಬಿಡುಗಡೆಗೊಳಿಸಿರುವ ಸಿಡಿ ಫೇಕ್ ತಂತ್ರಜ್ಞಾನದಿಂದ ಕೂಡಿದ ರಾಸಲೀಲೆ ವಿಡಿಯೋ ಹರಿಬಿಟ್ಟಿದ್ದು, ಇದು ಜಾರಕಿಹೊಳಿ ಕುಟುಂಬದ ವಿರುದ್ಧ ಮಾಡಿರುವ ರಾಜಕೀಯ ವಿರೋಧಿಗಳ ಹುನ್ನಾರ-ಷಡ್ಯಂತ್ರ ಎಂದು ಆಕ್ರೋಶ ವ್ಯಕ್ತಪಡಿಸಿದರು. ಸಿಡಿ ಬಗ್ಗೆ ಸಮಗ್ರ ತನಿಖೆ ನಡೆಸಲು …

Read More »

ವಿವಾದಿತ ಸಿಡಿ ಪ್ರಕರಣ ತನಿಖೆಗೆ ಆಗ್ರಹಿಸಿ ಕೌಜಲಗಿಯಲ್ಲಿ ಪ್ರತಿಭಟನೆ

ರಮೇಶ ಜಾರಕಿಹೊಳಿ ಅಭಿಮಾನಿಗಳು ಹಾಗೂ ಬೆಂಬಲಿಗರಿಂದ ರಸ್ತೆ ತಡೆ, ಟೈರ್‍ಗೆ ಬೆಂಕಿ ಹಚ್ಚಿ ಪ್ರತಿಭಟನೆ ಗೋಕಾಕ: ರಮೇಶ ಜಾರಕಿಹೊಳಿ ಅವರ ಕೌಜಲಗಿ ಗ್ರಾಮದ ಅಭಿಮಾನಿ ಬಳಗ ಹಾಗೂ ಬೆಂಬಲಿಗರು ಗುರುವಾರದಂದು ವಿವಾದಿತ ಸಿಡಿ ಪ್ರಕರಣದ ತನಿಖೆಯನ್ನು ಸಿಬಿಐ ಅಥವಾ ಸಿಐಡಿಗೆ ವಹಿಸಬೇಕೆಂದು ಆಗ್ರಹಿಸಿ ಕಂದಾಯ ನಿರೀಕ್ಷಕ ಎಮ್.ಆಯ್.ಮಠ ಅವರ ಮುಖಾಂತರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ ಮನವಿ ಸಲ್ಲಿಸಿದರು. ಗ್ರಾಮದ ರವಿವರ್ಮ ಚೌಕದಲ್ಲಿ ಸೇರಿದ ರಮೇಶ ಜಾರಕಿಹೊಳಿ ಅವರ ಅಭಿಮಾನಿಗಳು ಹಾಗೂ ಬೆಂಬಲಿಗರು …

Read More »

ವಿದ್ಯಾರ್ಥಿಗಳು ವ್ಯಕ್ತಿತ್ವ ವಿಕಸನ ವೃದ್ಧಿಸಿಕೊಳ್ಳುವುದು ಅಗತ್ಯ: ರಮೇಶ ಗೊಂಗಡಿ

ತುಕ್ಕಾನಟ್ಟಿ: ವ್ಯಕ್ತಿತ್ವ ಎಂಬುದು ಅನೇಕ ಶಕ್ತಿಗಳ ಸಂಗಮ. ಆದರ್ಶ,ಸದಾಚಾರ,ಶ್ರದ್ಧೆ, ನಿಷ್ಠೆ, ದಕ್ಷತೆ, ಎಚ್ಚರ-ಸನ್ನಿವೇಶಗಳೊಡನೆ ಹೊಂದಿಕೊಳ್ಳುವ ಸಾಮರ್ಥ್ಯ, ವೃತ್ತಿಪ್ರಿಯತೆ,ಪರೋಪಕಾರ ಬುದ್ಧಿ,ಪ್ರಾಮಾಣಿಕತೆಗಳು ವ್ಯಕ್ತಿತ್ವ ನಿರ್ಮಿಸುವ ಶಕ್ತಿಗಳು.ಈ ನಿಟ್ಟಿನಲ್ಲಿ ನೋಡಿದಾಗ ನಮಗೆ ವ್ಯಕ್ತಿ ಮುಖ್ಯವಲ್ಲ ವ್ಯಕ್ತಿತ್ವ ಮುಖ್ಯ ಎಂಬುದು ಅರ್ಥವಾಗುತ್ತದೆ. ಹೂವಿಗೆ ಪರಿಮಳವಿದ್ದಂತೆ ,ಮಾನವರಿಗೆ ವ್ಯಕ್ತಿತ್ವ ಅಷ್ಟೇ ಮುಖ್ಯ. ಪ್ರತಿಯೊಬ್ಬರ ಜೀವನದ ಒಳಿತು ಕೆಡಕುಗಳಿಗೆ ಅವರೇ ಶಿಲ್ಪಿಗಳಾಗಿರುತ್ತಾರೆ. ಮನುಷ್ಯ ತನ್ನ ಜೀವನವನ್ನು ತನ್ನಿಷ್ಟದಂತೆ ರೂಪಿಸಿಕೊಳ್ಳುತ್ತಾನೆ, ಅಂದರೆ ತನ್ನೆಲ್ಲ ಆಲೋಚನೆಗಳ ವಸ್ತುರೂಪವೇ ಮಾನವನಾಗಿರುತ್ತಾನೆ. ವ್ಯಕ್ತಿತ್ವವೆಂಬುದು ಹುಟ್ಟಿನಿಂದ …

Read More »

ಬೆತ್ತಲೆ ಪೂಜೆ ಮಾಡಿದ್ರೆ 50ಕೋಟಿ ರೂ. ಮಳೆ ಸುರಿಯುತ್ತೆ

ನಾಗ್ಪುರ: ಬ್ಲ್ಯಾಕ್​ ಮ್ಯಾಜಿಕ್​ನಲ್ಲಿ ತೊಡಗಿದ್ದ ಐವರನ್ನು ಮಹಾರಾಷ್ಟ್ರದ ನಾಗ್ಪುರ ಪೊಲೀಸರು ಬಂಧಿಸಿದ್ದಾರೆ. ಫೆ.26ರಂದು ಸಂತ್ರಸ್ತೆ ನೀಡಿದ ದೂರಿನ ಆಧಾರದ ಮೇಲೆ ಆರೋಪಿಗಳನ್ನು ಬ್ಲ್ಯಾಕ್​ ಮ್ಯಾಜಿಕ್​ ಕಾಯ್ದೆ ಅಡಿಯಲ್ಲಿ ಬಂಧಿಸಲಾಗಿದೆ. ಬೆತ್ತಲೆಯಾಗಿ ಪೂಜೆ ಮಾಡಿದರೆ 50 ಕೋಟಿ ರೂಪಾಯಿ ಮಳೆಯಂತೆ ಸುರಿಯಲಿದೆ ಎಂದು ಅಪ್ರಾಪ್ತೆಯನ್ನು ಮರಳು ಮಾಡಲು ಹೋಗಿ ಆರೋಪಿಗಳು ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ. ದೂರಿನಲ್ಲಿ ಉಲ್ಲೇಖಿಸಿರುವಂತೆ ವ್ಯಕ್ತಿಯೊಬ್ಬ ಈ ತಿಂಗಳ ಆರಂಭದಲ್ಲಿ ಅಪ್ರಾಪ್ತೆಯ ಬಳಿ ತೆರಳಿದ್ದ. ಆತನ ಸಹವರ್ತಿಗಳು ಸೂಚನೆಯಂತೆ …

Read More »