Breaking News

ಮೋಡ ಬಿತ್ತನೆ ಬಗ್ಗೆ ರಾಜ್ಯ ಸರ್ಕಾರ ಚಿಂತನೆ ಮಾಡಿಲ್ಲ : ಸಚಿವ ಕೃಷ್ಣಬೈರೇಗೌಡ ಸ್ಪಷ್ಟನೆ

Spread the love

ಬೆಂಗಳೂರು : ರಾಜ್ಯ ಸರ್ಕಾರವು ಮೋಡ ಬಿತ್ತನೆಗೆ ಚಿಂತನೆ ಮಾಡಿಲ್ಲ. ಕರ್ನಾಟಕದಲ್ಲಿ ಮಳೆ ಕೊರತೆ ಆಗಲ್ಲ ಎಂಬ ವರದಿ ಇದೆ ಎಂದು ಸಚಿವ ಕೃಷ್ಣಬೈರೇಗೌಡ ತಿಳಿಸಿದ್ದಾರೆ.

ರಾಜ್ಯ ಸರ್ಕಾರವು ಮೋಡ ಬಿತ್ತನೆಗೆ ಚಿಂತನೆ ಮಾಡಿಲ್ಲ.

ಕರ್ನಾಟಕದಲ್ಲಿ ಮಳೆ ಕೊರತೆ ಆಗಲ್ಲ ಎಂಬ ವರದಿ ಇದೆ. ತಜ್ಞರ ವರದಿ ಪ್ರಕಾರ ಶೇ. 96 ರಿಂದ ಶೇ. 104 ರಷ್ಟು ಮಳೆಯಾಗುವ ಸಾಧ್ಯತೆ ಇದೆ. ಜೂನ್ ತಿಂಗಳಲ್ಲಿ ಎಲ್ಲಾ ಜಿಲ್ಲೆಗಳಲ್ಲಿ ಸ್ವಲ್ಪ ಮಳೆ ಸಮಸ್ಯೆಯಾಗಬಹುದು. ಆದರೆ ಜುಲೈನಲ್ಲಿ ಎಲ್ಲಾ ಜಿಲ್ಲೆಗಳಲ್ಲೂ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ.

ಏಪ್ರಿಲ್ ನಿಂದ ಕಾವೇರಿ-2 ನೋಂದಣಿ ಪ್ರಕ್ರಿಯೆ ಅಳವಡಿಸಲಾಗಿದೆ. 251 ನೋಂದಣಿ ಕಚೇರಿಗಳಲ್ಲಿ ಇಂದು ಸಂಜೆಯೊಳಗೆ ಕಾವೇರಿ-2 ತಂತ್ರಾಂಶ ಜಾರಿಯಾಗಲಿದೆ. ಎಲ್ಲಾ ದಾಖಲೆಗಳನ್ನು ಕಾವೇರಿ-2 ತಂತ್ರಾಂಶದಲ್ಲಿ ಸಲ್ಲಿಕೆ ಮಾಡಬಹುದು. ಸಬ್ ರಿಜಿಸ್ಟ್ರಾರ್ ಕೂಡ ಅನ್ ಲೈನ್ ನಲ್ಲಿ ಮಾಡಬಹುದು. ನೋಂದಣಿ ಶುಲ್ಕವನ್ನು ಆನ್ ಲೈನ್ ನಲ್ಲೇ ಸಲ್ಲಿಕೆ ಮಾಡಬಹುದು. ಇದರಿಂದ ಜಮೀನು ಅಕ್ರಮವನ್ನು ತಡೆಯಬಹುದು. ಯಾರದ್ದೋ ಜಮೀನು ಯಾರಿಗೋ ನೋಂದಣಿ ಮಾಡಲು ಆಗಲ್ಲ ಎಂದು ಹೇಳಿದ್ದಾರೆ.


Spread the love

About Ad9 News

Check Also

ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಭೆ

Spread the love ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಭೆಯಲ್ಲಿ Chief Minister of Karnataka ಅವರೊಂದಿಗೆ ಭಾಗವಹಿಸಿ, …

Leave a Reply

Your email address will not be published. Required fields are marked *