Breaking News

ಬೆಳಗಾವಿ

ಸಚಿವ ಸ್ಥಾನದಿಂದ ವಂಚಿತರಾಗಿರುವ ಮಹೇಶ ಕುಮಟಳ್ಳಿ ಅವರಿಗೆ ನನ್ನಿಂದ ಏನಾದರೂ ಅನ್ಯಾಯವಾದಲ್ಲಿ ರಾಜೀನಾಮೆ ನೀಡುವುದಾಗಿ ಹೇಳಿದ್ದೇನೆಯೇ ಹೊರತು ಸರ್ಕಾರಕ್ಕೆ ಯಾವುದೇ ರೀತಿಯ ಬೆದರಿಕೆಯೊಡ್ಡಿಲ್ಲವೆಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಸ್ಪಷ್ಟನೆ ನೀಡಿದ್ದಾರೆ

ಗೋಕಾಕ : ಸಚಿವ ಸ್ಥಾನದಿಂದ ವಂಚಿತರಾಗಿರುವ ಮಹೇಶ ಕುಮಟಳ್ಳಿ ಅವರಿಗೆ ನನ್ನಿಂದ ಏನಾದರೂ ಅನ್ಯಾಯವಾದಲ್ಲಿ ರಾಜೀನಾಮೆ ನೀಡುವುದಾಗಿ ಹೇಳಿದ್ದೇನೆಯೇ ಹೊರತು ಸರ್ಕಾರಕ್ಕೆ ಯಾವುದೇ ರೀತಿಯ ಬೆದರಿಕೆಯೊಡ್ಡಿಲ್ಲವೆಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಸ್ಪಷ್ಟನೆ ನೀಡಿದ್ದಾರೆ. ಶನಿವಾರ ಸಂಜೆ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಈ ಬಗ್ಗೆ ಮಾಧ್ಯಮಗಳಲ್ಲಿ ತಪ್ಪು ಹೇಳಿಕೆ ಪ್ರಕಟಗೊಂಡಿದೆ.     ಮಹೇಶ ಕುಮಟಳ್ಳಿ ಅವರಿಗೆ ಸಚಿವ ಸ್ಥಾನ ನೀಡದಿದ್ದಲ್ಲಿ ಶಾಸಕ ಹಾಗೂ ಸಚಿವ ಸ್ಥಾನಕ್ಕೆ ರಾಜೀನಾಮೆ …

Read More »

ದೇಶ ದ್ರೋಹಿಗಳಿಗೆ ಶಿಕ್ಷೆಯಾಗಬೇಕು ಎಂದು ಮೂಡಲಗಿನಲ್ಲಿ ಕಲ್ಮೇಶ್ವರ ವೃತ್ತದಲ್ಲಿ ಟೈರ್‍ಗೆ ಬೆಂಕಿ ಹಚ್ಚಿ ಅಕ್ರೋಶ ವ್ಯಕ್ತಪಡಿಸಿ ಬೃಹತ್ ಪ್ರತಿಭಟನಾ ಮೆರವಣಿಗೆ ಮಾಡುವ ಮೂಲಕ ಮೂಡಲಗಿ ವೃತ್ತ ನಿರೀಕ್ಷಕ ವೆಂಕಟೇಶ ಮುರನಾಳ ಅವರ ಮುಖಾಂತರ ಗೃಹಮಂತ್ರಿಯವರಿಗೆ ಮನವಿ

ಮೂಡಲಗಿ: ಬೆಂಗಳೂರಿನ ಪ್ರೀಡಂ ಪಾರ್ಕ್ ಮೈದಾನದಲ್ಲಿ ನಿನ್ನೆ ನಡೆದ ಎನ್‍ಆರ್‍ಸಿ ಮತ್ತು ಸಿಎಎ ವಿರೋಧಿಸಿ ಕೇಂದ್ರ ಸರ್ಕಾರದ ವಿರುದ್ದ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಅಮೂಲ್ಯ ಲಿಯೋನ್ ಎಂಬ ಪತ್ರಿಕೋಧ್ಯಮ ವಿದ್ಯಾರ್ಥಿನಿ “ಪಾಕಿಸ್ತಾನ್ ಜಿಂದಾಬಾದ್” ಎಂಬ ದೇಶ ವಿರೋಧಿ ಘೊಷಣೆ ಕೂಗಿ ದೇಶದ್ರೋಹ ಮಾಡಿರುವುದನ್ನು ಖಂಡಿಸಿ ಸ್ಥಳೀಯ ಶ್ರೀ ಮಂಜುನಾಥ ಸೈನಿಕ ತರಭೇತಿ ಕೇಂದ್ರ ಹಾಗೂ ವಿವಿಧ ಸಂಘಟನೆಯ ದೇಶಭಕ್ತರು ಕಲ್ಮೇಶ್ವರ ವೃತ್ತದಲ್ಲಿ ಟೈರ್‍ಗೆ ಬೆಂಕಿ ಹಚ್ಚಿ ಅಕ್ರೋಶ ವ್ಯಕ್ತಪಡಿಸಿ ಬೃಹತ್ ಪ್ರತಿಭಟನಾ …

Read More »

ಸರ್ಕಾರಿ ಶಾಲೆಯಲ್ಲಿ ಪ್ರಥಮ ವರ್ಷದ ವಾರ್ಷಿಕ ಸ್ನೇಹ ಸಮ್ಮೇಳನ 2019-20

1938 ರಲ್ಲಿ ಶಾಲೆಯ ಲಕ್ಷ್ಮೀದೇವಿ ಗುಡಿಯ ಆವರಣದಲ್ಲಿ 31 ವಿದ್ಯಾರ್ಥಿಗಳಿಂದ ಪ್ರಾರಂಭವಾಯಿತು ಪ್ರಸ್ತುತ ವಿದ್ಯಾರ್ಥಿಗಳ ಮಟ್ಟಕ್ಕೆ ಬೆಳೆದಿದೆ ಕಾರಣರಾದ ಶಾಲೆಯ ಸಿಬ್ಬಂದಿ ವರ್ಗ ಪ್ರಧಾನ ಗುರುಗಳು SDMC ಅಧ್ಯಕ್ಷರು ಹಾಗೂ ಸರ್ವ ಸದಸ್ಯರು ಊರಿನ ಗ್ರಾಮಸ್ಥರು ಪಂಚಾಯತಿ ಎಲ್ಲರಿಗೂ ಧನ್ಯವಾದಗಳು. 81 ವರ್ಷಗಳ ಇತಿಹಾಸವಿರುವ ಈ ಶಾಲೆಯಲ್ಲಿ ಪ್ರಥಮ ವಾರ್ಷಿಕ ಸಮ್ಮೇಳನ ತಳಕಟನಾಳ ವಾರ್ಷಿಕೋತ್ಸವದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಾ,ಶ್ರೀ ಎಂ. ಪಿ. ಹಿರೇಮಠ ಸಿ. ಆರ್. ಪಿ. ಅವರು ಬೇರೆ …

Read More »

ಮನಸ್ಸಿನೊಂದಿಗೆ ಆರೋಗ್ಯಯುತ ಶರೀರದ ಅವಶ್ಯಕತೆ ಇದೆ ಎಂದು ಚಿಕ್ಕೋಡಿ ಜಿಲ್ಲಾ ಮದ್ಯಾಹ್ನ ಉಪಹಾರ ಯೋಜನೆ ನಿರ್ಧೇಶಕ ದೀಪಕ ಕುಲಕರ್ಣಿ ಹೇಳಿದರು. ಅವರು ಸೋಮವಾರ ಪಟ್ಟಣದಲ್ಲಿ ಜರುಗಿದ ರಾಜ್ಯ ಮಟ್ಟದ ಎಸ್.ಎಸ್.ಎಲ್.ಸಿ ಪೂರ್ವ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿದರು

ಮೂಡಲಗಿ : ವಿದ್ಯಾರ್ಥಿಗಳು ಸಮರ್ಪಕ ರೀತಿಯಲ್ಲಿ ಪರೀಕ್ಷೆಗಳಲ್ಲಿ ಯಶಸ್ವಿಯಾಗಬೇಕಾದರೆ ಸದೃಢ ಮನಸ್ಸಿನೊಂದಿಗೆ ಆರೋಗ್ಯಯುತ ಶರೀರದ ಅವಶ್ಯಕತೆ ಇದೆ ಎಂದು ಚಿಕ್ಕೋಡಿ ಜಿಲ್ಲಾ ಮದ್ಯಾಹ್ನ ಉಪಹಾರ ಯೋಜನೆ ನಿರ್ಧೇಶಕ ದೀಪಕ ಕುಲಕರ್ಣಿ ಹೇಳಿದರು. ಅವರು ಸೋಮವಾರ ಪಟ್ಟಣದಲ್ಲಿ ಜರುಗಿದ ರಾಜ್ಯ ಮಟ್ಟದ ಎಸ್.ಎಸ್.ಎಲ್.ಸಿ ಪೂರ್ವ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿದರು. ಮೂಡಲಗಿ ವಲಯವು ರಾಜ್ಯದಲ್ಲಿ ಪರೀಕ್ಷೆಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸುವ ಮೂಲಕ ತನ್ನ ವಿಶೇಷತೆ ಹೊಂದಿದೆ. ಇಲ್ಲಿಯ ಶಿಕ್ಷಕ ಸಮುದಾಯದ ಸತತ ಪ್ರಯತ್ನ …

Read More »

ಪ್ರತಿಭಾವಂತ ಪ್ರವೀಣ ನವಣಿ ವಿದ್ಯಾರ್ಥಿಯ ಹುಟ್ಟು ಹಬ್ಬ ಆಚರಣೆ*

*ಪ್ರತಿಭಾವಂತ ಪ್ರವೀಣ ನವಣಿ ವಿದ್ಯಾರ್ಥಿಯ ಹುಟ್ಟು ಹಬ್ಬ ಆಚರಣೆ* ಮೂಡಲಗಿ:ಇಲ್ಲಿಯ ಶ್ರೀ ಶ್ರೀನಿವಾಸ ಆಂಗ್ಲ ಮಾದ್ಯಮ ಶಾಲೆಯ 6ನೇ ತರಗತಿಯ ಪ್ರತಿಭಾವಂತ ವಿದ್ಯಾರ್ಥಿ ಪ್ರವೀಣ ನವಣಿ ಈತನ ಹುಟ್ಟು ಹಬ್ಬವನ್ನು ಶಾಲಾ ಆವರಣದಲ್ಲಿ ಪೇರಲ ಸಸಿ ನೆಟ್ಟು ವಿಭಿನ್ನವಾಗಿ ಆಚರಿಸಿದರು. ಶುಕ್ರವಾರ ವಿದ್ಯಾರ್ಥಿಯ ಹುಟ್ಟು ಹಬ್ಬದ ನಿಮಿತ್ಯ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಪ್ರಾಚಾರ್ಯ ಮನೋಜ ಭಟ್ಟ ಮಾತನಾಡಿ, ವಿದ್ಯಾರ್ಥಿಗಳ ಹುಟ್ಟು ಹಬ್ಬದಂದು ಶಾಲೆಗಳಲ್ಲಿ ಆಚರಿಸಬೇಕು ಇದರಿಂದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡುವುದರ ಜೊತೆಗೆ …

Read More »

ಹರಪ್ಪ ನಾಗರೀಕತೆಯಿಂದ ಬೆಳೆದು ಬಂದು ಸಾವಿರಾರು ವರ್ಷಗಳಿಂದ ಗ್ರಾಮ, ನಗರ ಜೀವನಗಳಿಂದ ದೂರವಿದ್ದು, ಅಜ್ಞಾನ, ಅಂಧಕಾರಗಳಿಂದ ಅರಣ್ಯವಾಸಿಗಳಾಗಿ ಜೀವನ ನಡೆಸುತ್ತಿದ್ದ ಜನರಿಗೆ ಸೇವಾ ಲಾಲ್ ಮಹಾರಾಜರ ಜನನದಿಂದ ಮುಕ್ತಿಯ ಮೇಟ್ಟಿಲಾಯಿತು

ಮೂಡಲಗಿ : ಹರಪ್ಪ ನಾಗರೀಕತೆಯಿಂದ ಬೆಳೆದು ಬಂದು ಸಾವಿರಾರು ವರ್ಷಗಳಿಂದ ಗ್ರಾಮ, ನಗರ ಜೀವನಗಳಿಂದ ದೂರವಿದ್ದು, ಅಜ್ಞಾನ, ಅಂಧಕಾರಗಳಿಂದ ಅರಣ್ಯವಾಸಿಗಳಾಗಿ ಜೀವನ ನಡೆಸುತ್ತಿದ್ದ ಜನರಿಗೆ ಸೇವಾ ಲಾಲ್ ಮಹಾರಾಜರ ಜನನದಿಂದ ಮುಕ್ತಿಯ ಮೇಟ್ಟಿಲಾಯಿತು. ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎ.ಸಿ ಮನ್ನಿಕೇರಿ ಹೇಳಿದರು. ಅವರು ಮಂಜುನಾಥ ಸೈನಿಕ ತರಬೇತಿ ಕೇಂದ್ರದಲ್ಲಿ ಹಮ್ಮಿಕೊಂಡ ಸೇವಾಲಾಲ್ ಜಯಂತಿಯಲ್ಲಿ ಭಾವಚಿತ್ರಕ್ಕೆ ಪೂಜೆಯನ್ನು ಸಲ್ಲಿಸಿ ಮಾತನಾಡುತ್ತಾ ಸೇವಾಭಾಯ, ಸೇವಾಲಾಲ್ ಎಂಬ ನಾಮದೊಂದಿಗೆ ಬಡ ಜನರ ಅಜ್ಞಾನ ದೂರಮಾಡಲು …

Read More »

ಕೆಲವು ಸಂದರ್ಭಗಳಲ್ಲಿ ವಿನಾಕಾರಣ ನೌಕರರ ಮೇಲೆ ಆಗುತ್ತಿರುವ ದೌರ್ಜನ್ಯಗಳನ್ನು ತಡೆಗಟ್ಟ ಬೇಕೆಂದು ಆಗ್ರಹಿಸಿ ಗೋಕಾಕ ತಹಶೀಲ್ದಾರ ಹಾಗೂ ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿಗಳ ಮೂಲಕ ಸರ್ಕಾರಕ್ಕೆ ಆರ್.ಡಿ.ಪಿ.ಆರ್ ಸಿಬ್ಬಂದಿಗಳು ಮನವಿ ನೀಡಿದರು.

ಗೋಕಾಕ: ಗ್ರಾಮೀಣ ಪ್ರದೇಶದಲ್ಲಿ ವಾಸಿಸುತ್ತಿರುವ ಸಾರ್ವಜನಿಕರಿಗೆ ಕನಿಷ್ಠ ಮೂಲಭೂತ ಸೌಕರ್ಯಗಳನ್ನು ಒಳಗೊಂಡಂತೆ ಅಭಿವೃದ್ದಿ ಕಾರ್ಯಗಳನ್ನು ಆರ್.ಡಿ.ಪಿ.ಆರ್ ಇಲಾಖೆಯಿಂದ ಅನುಷ್ಠಾನಗೊಳಿಸಲಾಗುತ್ತದೆ. ಇಲಾಖೆಯ ಈ ಕಾರ್ಯಗಳನ್ನು ಈಡೇರಿಸುವಲ್ಲಿ ಗ್ರಾ.ಪಂಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪಿಡಿಒಗಳು, ಕಾರ್ಯದರ್ಶಿಗಳು, ಎಸ್.ಡಿ.ಸಿ ಹಾಗೂ ಗ್ರಾ.ಪಂ ಸಿಬ್ಬಂದಿಗಳ ಶ್ರಮ ಸಿಂಹಪಾಲಾಗಿದ್ದರು ಕೆಲವು ಸಂದರ್ಭಗಳಲ್ಲಿ ವಿನಾಕಾರಣ ನೌಕರರ ಮೇಲೆ ಆಗುತ್ತಿರುವ ದೌರ್ಜನ್ಯಗಳನ್ನು ತಡೆಗಟ್ಟ ಬೇಕೆಂದು ಆಗ್ರಹಿಸಿ ಗೋಕಾಕ ತಹಶೀಲ್ದಾರ ಹಾಗೂ ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿಗಳ ಮೂಲಕ ಸರ್ಕಾರಕ್ಕೆ ಆರ್.ಡಿ.ಪಿ.ಆರ್ ಸಿಬ್ಬಂದಿಗಳು ಮನವಿ ನೀಡಿದರು. …

Read More »

ಶಿಕ್ಷಣ ರಂಗದ ಪ್ರಗತಿಯಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಕೊಡುಗೆ ಅನನ್ಯವಾಗಿದೆ

ಗೋಕಾಕ : ಶಿಕ್ಷಣ ರಂಗದ ಪ್ರಗತಿಯಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಕೊಡುಗೆ ಅನನ್ಯವಾಗಿದೆ. ಮೂಡಲಗಿ ವಲಯದ ವಿದ್ಯಾರ್ಥಿಗಳು ಶೈಕ್ಷಣಿಕ ಕ್ಷೇತ್ರದಲ್ಲಿ ವಿಶಿಷ್ಟ ಸಾಧನೆಗೈಯಲು ಇವರ ಪ್ರೇರಣೆಯೇ ಕಾರಣವಾಗಿದೆ ಎಂದು ಗೋಕಾಕ ಟಿಎಪಿಸಿಎಂಎಸ್ ಅಧ್ಯಕ್ಷ ಅಶೋಕ ನಾಯಿಕ ಹೇಳಿದರು. ಇಲ್ಲಿಯ ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ಶನಿವಾರದಂದು ಮೂಡಲಗಿ ಶೈಕ್ಷಣಿಕ ವಲಯದ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯಿಂದ ನಡೆಯುವ ಪೂರ್ವ ಸಿದ್ಧತಾ ಪರೀಕ್ಷೆಯ ಉತ್ತರ ಪತ್ರಿಕೆಗಳನ್ನು ವಿತರಿಸಿ ಅವರು ಮಾತನಾಡುತ್ತಿದ್ದರು. ವಿದ್ಯಾರ್ಥಿಗಳು …

Read More »

ಬಿ.ಕಾಂ ಪದವಿ ವಿದ್ಯಾರ್ಥಿಗಳಲ್ಲಿ ಸಿ.ಎ. ಕೋರ್ಸ್ ಅರಿವು ಮೂಡಿಸುವುದು ಅವಶ್ಯಕವಿದೆ ಚಾರ್ಟರ್ಡ್ ಅಕೌಂಟಟ್ ಜಯಕುಮಾರ ಪಾಟೀಲ ಹೇಳಿದರು

ಮೂಡಲಗಿ : ಬಿ.ಕಾಂ ಪದವಿ ವಿದ್ಯಾರ್ಥಿಗಳಲ್ಲಿ ಸಿ.ಎ. ಕೋರ್ಸ್ ಅರಿವು ಮೂಡಿಸುವುದು ಅವಶ್ಯಕವಿದೆ ಇಂದು ತಾಂತ್ರಿಕತೆ ಮತ್ತು ವೈಜ್ಞಾನಿಕತೆ ಬೆಳದಂತೆ ಅನೇಕ ಕೋರ್ಸಗಳು ಪದವಿಗಳು ಬೆಳೆದರು ಚಾರ್ಟರ್ಡ್ ಅಕೌಂಟ್ ಕೋರ್ಸ ತನ್ನ ಮೌಲ್ಯವನ್ನು ಹೆಚ್ಚು ಅಭಿವೃಧ್ದಿ ಗೊಳಿಸಿಕೊಂಡಿದೆ ಅಲ್ಲದೆ ಬಿಕಾಂ ಪದವಿ ಪಡೆದ ವಿದ್ಯಾರ್ಥಿಗಳಲ್ಲಿ ಭವಿಷ್ಯದ ದೂರದೃಷ್ಟಿ ಇಲ್ಲದೇ ಕೇವಲ ಬ್ಯಾಂಕ್ ಮತ್ತು ವಾಣಿಜ್ಯ ಕ್ಷೇತ್ರಕ್ಕೆ ಮಾತ್ರ ಹೆಚ್ಚಿನ ಪ್ರಾದ್ಯಾನತೆ ನೀಡಿ ಸಿ.ಎ. ಕೋರ್ಸ್ ಬಗ್ಗೆ ನಕಾರಾತ್ಮಕ ಭಾವನೆ ಹೊಂದಿದ್ದು …

Read More »

ವಿದ್ಯಾರ್ಥಿ ದಿಸೆಯಿಂದಲೆ ಸ್ಪರ್ಧಾತ್ಮಕತೆ, ಆಚಾರ, ವಿಚಾರ, ನೈತಿಕ ಮೌಲ್ಯಗಳು

ಮೂಡಲಗಿ: ವಿದ್ಯಾರ್ಥಿ ದಿಸೆಯಿಂದಲೆ ಸ್ಪರ್ಧಾತ್ಮಕತೆ, ಆಚಾರ, ವಿಚಾರ, ನೈತಿಕ ಮೌಲ್ಯಗಳು, ಮಹಾತ್ಮರ ತತ್ವಾದರ್ಶಗಳನ್ನು ಮೈಗೂಡಿಸಿಕೊಂಡು ದೇಶದ ಭವ್ಯ ಭವಿಷ್ಯತ್ತಿನ ಯುವ ಪ್ರಜೆಗಳಾಗಿ ನಿರ್ಮಾಣ ಹೊಂದುವದು ತಮ್ಮಲ್ಲಿಯೇ ಇರುವದು ಎಂದು ಗೋಕಾಕ ಮೂಡಲಗಿ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜ ಹೆಗ್ಗನಾಯಕ ಹೇಳಿದರು. ಅವರು ಅಧಿಕಾರಿಗಳ ನಡೆ ಶಾಲೆ ಕಡೆ ಕಾರ್ಯಕ್ರಮದ ನಿಮಿತ್ಯ ಬುಧವಾರ ಮೂಡಲಗಿ ತಾಲೂಕಿನ ಹುಣಶ್ಯಾಳ ಪಿಜಿ, ವಡೇರಹಟ್ಟಿ, ಹುಣಶ್ಯಾಳ ಪಿವಾಯ್ ಗ್ರಾಮಗಳ ಸರಕಾರಿ ಪ್ರೌಢ ಶಾಲೆಗಳಿಗೆ ಭೇಟಿ ನೀಡಿ, …

Read More »