Breaking News

ಮೂಡಲಗಿ

1.32 ಕೋಟಿ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಿಸಿದ ಕುಲಗೋಡ ಪೊಲೀಸ್ ಠಾಣೆ ಉದ್ಘಾಟಿಸಿದ ಬಾಲಚಂದ್ರ ಜಾರಕಿಹೊಳಿ

  ಮೂಡಲಗಿ : ಸಾರ್ವಜನಿಕರ ನೆಮ್ಮದಿ ಬದುಕಿಗೆ ಪೊಲೀಸ್‍ರು ರಕ್ಷಕರಾಗಿ ಸೇವೆ ಸಲ್ಲಿಸುತ್ತಿರುವುದು ಸ್ತುತ್ಯಾರ್ಹವೆಂದು ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಪ್ರಶಂಸೆ ವ್ಯಕ್ತಪಡಿಸಿದರು. ರವಿವಾರದಂದು ತಾಲೂಕಿನ ಕುಲಗೋಡ ಗ್ರಾಮದಲ್ಲಿ 1.32 ಕೋಟಿ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಿಸಿದ ಕುಲಗೋಡ ಪೊಲೀಸ್ ಠಾಣೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ದೇಶದ ಗಡಿ ರಕ್ಷಣೆಗೆ ಹೋರಾಡುತ್ತಿರುವ ಸೈನಿಕರಂತೆ ಪೊಲೀಸರು ಸಹ ದಿನದ 24 ತಾಸು ಸೇವೆ ಸಲ್ಲಿಸುತ್ತಿರುವುದು ಶ್ಲಾಘನೀಯವಾಗಿದೆ ಎಂದು ಹೇಳಿದರು. …

Read More »

ಮಾನವರಾಗಿ ಹುಟ್ಟಿದ ಮೇಲೆ ನಾವು ಸಕಲರಿಗೂ ಒಳ್ಳೆಯದನ್ನೇ ಬಯಸಬೇಕು ಶಾಸಕ, ಕೆಎಮ್‌ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

  ಮೂಡಲಗಿ: ಮಾನವರಾಗಿ ಹುಟ್ಟಿದ ಮೇಲೆ ನಾವು ಸಕಲರಿಗೂ ಒಳ್ಳೆಯದನ್ನೇ ಬಯಸಬೇಕು. ಈ ಭೂಮಿಯಲ್ಲಿ ಮನುಷ್ಯರಾಗಿ ಹುಟ್ಟಿರುವದು ನಮ್ಮೆಲ್ಲರ ಪುಣ್ಯವಾಗಿದೆ. ಆದರೆ ಕೆಲವೇ ಕೆಲವು ಜನರು ಈ ಭೂಮಿಯಿಂದ ನಿರ್ಗಮನರಾಗುವಾಗ ದೇವರಾಗಿ ಹೋಗುತ್ತಾರೆ. ಇದಕ್ಕೆ ವಿಜಯಪುರದ ಸಿದ್ಧೇಶ್ವರ ಸ್ವಾಮಿಜಿಗಳೇ ಜ್ವಲಂತ ಉದಾಹರಣೆ ಎಂದು ಶಾಸಕ, ಕೆಎಮ್‌ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ತಾಲೂಕಿನ ವಡೇರಹಟ್ಟಿ ಗ್ರಾಮದ ಮಲ್ಲಿಕಾರ್ಜುನ ಮಠದಲ್ಲಿ ಕಳೆದ ಭಾನುವಾರದಂದು ಸಿದ್ಧೇಶ್ವರ ಸ್ವಾಮಿಜಿಗಳ ನುಡಿ ನಮನ ಕಾರ್ಯಕ್ರಮದಲ್ಲಿ ಪಾಲ್ಗೊಂಡು …

Read More »

ಮುಸ್ಲಿಂ ಸಮುದಾಯದ ಪ್ರಗತಿಗಾಗಿ ಸಾಕಷ್ಟು ಶ್ರಮಿಸಿದ್ದೇನೆ, ಈ ಸಮಾಜ ಶಿಕ್ಷಣದಲ್ಲಿ ಕ್ರಾಂತಿ ಮಾಡಬೇಕಿದೆ:ಕೆಎಮ್‍ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

  ಮೂಡಲಗಿ: ಅರಭಾವಿ ಕ್ಷೇತ್ರದಲ್ಲಿ ಇಲ್ಲಿಯವರೆಗೆ ಮುಸ್ಲಿಂ ಸಮುದಾಯ ಬಾಂಧವರಿಗೆ ಇತರೆ ಸಮಾಜದವರಿಂದ ಯಾವುದೇ ರೀತಿಯ ತೊಂದರೆಯಾಗದಂತೆ ನೋಡಿಕೊಂಡಿದ್ದು, ನಾನು ಶಾಸಕನಾಗಿ ಆಯ್ಕೆಯಾದ ಬಳಿಕ ಎಲ್ಲ ಸಮುದಾಯಗಳು ಒಗ್ಗಟ್ಟಿನ ಮಂತ್ರ ಪಠಿಸಿ ಶಾಂತಿ ಸಾಮರಸ್ಯವನ್ನು ಕಾಪಾಡಿಕೊಂಡು ಬರುತ್ತಿವೆ ಎಂದು ಶಾಸಕ ಹಾಗೂ ಕೆಎಮ್‍ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಸೋಮವಾರದಂದು ಪಟ್ಟಣದ ತಹಶೀಲದಾರ ಕಚೇರಿಯ ಹತ್ತಿರ ಜರುಗಿದ ಅರಭಾವಿ ಕ್ಷೇತ್ರದ ಮುಸ್ಲಿಂ ಬೃಹತ್ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮುಸ್ಲಿಂ …

Read More »

ಎಲ್ಲ ಸಮಾಜಗಳು ಸಹೋದರತ್ವ ಭಾವನೆಗಳಿಂದ ನಡೆದಾಗ ಮಾತ್ರ ಅಭಿವೃದ್ದಿ ಸಾಧ್ಯ-ಶಾಸಕ ಬಾಲಚಂದ್ರ ಜಾರಕಿಹೊಳಿ.

ಘಟಪ್ರಭಾ: ನಿಮ್ಮ ಸಮಾಜವನ್ನು ಪ್ರೀತಿಸುವುದರ ಜೊತೆಗೆ ಮತ್ತೊಂದು ಸಮಾಜದವರ ಬಗ್ಗೆ ಗೌರವ, ಆದರ ಇಟ್ಟುಕೊಳ್ಳಬೇಕು. ಸಮಾಜದಲ್ಲಿ ಪ್ರತಿ ಜಾತಿಗಳು ಸಹೋದರತ್ವ ಮನೋಭಾವನೆಯಿಂದ ನಡೆದುಕೊಂಡಾಗ ಮಾತ್ರ ಎಲ್ಲ ಸಮುದಾಯಗಳು ಪ್ರಗತಿ ಸಾಧಿಸಲು ಸಾಧ್ಯವಾಗುತ್ತದೆ ಎಂದು ಅರಭಾವಿ ಶಾಸಕ, ಕೆಎಮ್‍ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಶನಿವಾರದಂದು ಸಮೀಪದ ಅರಭಾವಿ (ಗುಡ್ಡದವಾರಿ) ಪಟ್ಟಣದಲ್ಲಿ ಜರುಗಿದ ದಲಿತ ಬೃಹತ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಅವರು, ಎಸ್.ಸಿ/ಎಸ್.ಟಿ ಸಮುದಾಯದ ಸರ್ವಾಂಗೀಣ ಅಭಿವೃದ್ದಿಗೆ ಬದ್ಧರಿರುವುದಾಗಿ ಹೇಳಿದರು. ಸಮಾಜದಲ್ಲಿರುವ …

Read More »

ಲಿಂಗಾಯತ ಸಮುದಾಯದ ಮುಖ್ಯಮಂತ್ರಿಯಾಗಲು ಮತಗಳ ವಿಭಜನೆ ಮಾಡದೇ ಒಗ್ಗಟ್ಟಾಗಿ ಬಿಜೆಪಿಗೆ ಆಶೀರ್ವಾದ ಮಾಡಿದರೇ ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ-ಶಾಸಕ ಬಾಲಚಂದ್ರ ಜಾರಕಿಹೊಳಿ

  ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡಿದರೇ ಅದು ನಮ್ಮ ಬಿಜೆಪಿ ಸರ್ಕಾರ ಮಾತ್ರ. ನಾಗನೂರು ಪಟ್ಟಣದಲ್ಲಿ ಬೃಹತ್ ವೀರಶೈವ ಲಿಂಗಾಯತ ಸಮಾವೇಶವನ್ನು ಉದ್ಘಾಟಿಸಿದ ಬಾಲಚಂದ್ರ ಜಾರಕಿಹೊಳಿ. ಮೂಡಲಗಿ: ಈ ರಾಜ್ಯದಲ್ಲಿ ಪ್ರಬಲ ಲಿಂಗಾಯತ ಸಮುದಾಯದ ಮುಖ್ಯಮಂತ್ರಿಯಾಗಬೇಕಾದರೇ ವೀರಶೈವ ಲಿಂಗಾಯತ ಸಮಾಜ ಬಾಂಧವರು ಒಗ್ಗಟ್ಟಿನಿಂದ ಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಮತ ನೀಡಿ ಆಶೀರ್ವಾದ ಮಾಡುವಂತೆ ಶಾಸಕ, ಕೆಎಮ್‍ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಸಮಾಜ ಬಾಂಧವರಲ್ಲಿ ಮನವಿ ಮಾಡಿದರು. …

Read More »

ಶ್ರೀ ಮಂಜುನಾಥ ಸೈನಿಕ ತರಬೇತಿ ಕೇಂದ್ರದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

  ಮೂಡಲಗಿ: ಮಹಿಳೆಯರು ಪ್ರತಿಯೊಂದು ಕ್ಷೇತ್ರದಲ್ಲಿ ಸಾಧನೆ ಮಾಡುತ್ತಿದ್ದಾರೆ ಮಹಿಳೆ ಅಬಲೆಯಲ್ಲ ಸಬಲೆ ಎಂದು ಮೂಡಲಗಿ ಸಮುದಾಯ ಆರೋಗ್ಯ ಕೇಂದ್ರದ ಮುಖ್ಯ ವೈದ್ಯಾಧಿಕಾರಿ ಡಾ.ಭಾರತಿ ಕೋಣಿ ಹೇಳಿದರು. ಅವರು ಮೂಡಲಗಿ ಶ್ರೀ ಮಂಜುನಾಥ ಸೈನಿಕ ತರಬೇತಿ ಕೇಂದ್ರದ ಸಭಾ ಭವನದಲ್ಲಿ ಭಾರತ ಸರ್ಕಾರದ ನೆಹರು ಯುವ ಕೇಂದ್ರ ಬೆಳಗಾವಿ ಶ್ರೀ ಭಗೀರಥ ಯುವತಿ ಮಂಡಲ ಹಳ್ಳೂರ ಹಾಗೂ ಮಂಜುನಾಥ ಸೈನಿಕ ತರಬೇತಿ ಕೇಂದ್ರ ಮೂಡಲಗಿ ಇವರುಗಳ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ …

Read More »

ಬಾಲಚಂದ್ರ ಜಾರಕಿಹೊಳಿ ಅವರಿಗೆ ರಾಜಾ ಹುಲಿ ಎಂದ ನಿರಾಣಿ

“ನನ್ನ ಕ್ಷೇತ್ರದ ಜನರೇ ನನ್ನ ದೇವರು” ಎಂದ ಶಾಸಕ‌ ಬಾಲಚಂದ್ರ ಜಾರಕಿಹೊಳಿ. *ವಿಜಯ ಸಂಕಲ್ಪ ಯಾತ್ರೆಗೆ ಅದ್ದೂರಿ ಸ್ವಾಗತ ಕೋರಿದ ಕಾರ್ಯಕರ್ತರು, ಬೃಹತ್ ಬೈಕ್ ರ್ಯಾಲಿ-ರೋಡ್ ಶೋ. ಕೇಸರಿಮಯವಾದ ಮೂಡಲಗಿ ಪಟ್ಟಣ ಮೂಡಲಗಿ: ಪ್ರಧಾನಿ ನರೇಂದ್ರ ಮೋದಿ ಅವರನ್ನು ನೋಡಿದ ಮೇಲೆ ಪ್ರತಿಯೊಬ್ಬರಿಗೂ ಸಾಕ್ಷಾತಃ ದೇವರಂತೆ ಕಾಣುತ್ತಾರೆ. ಅಷ್ಟೊಂದು ದೈವಿ ಸಂಕಲ್ಪ ಅವರಲ್ಲಿದೆ. ಹೀಗಾಗಿಯೇ ಜಗತ್ತಿನ ಹಲವಾರು ರಾಷ್ಟçಗಳು ಭಾರತದತ್ತ ಆಕರ್ಷಿಸಲು ಕಾರಣವಾಗಿದೆ. ಮೋದಿಯವರು ವಿಶ್ವಗುರುವಾಗಿ ಕಾಣತೊಡಗಿದ್ದಾರೆಂದು ಶಾಸಕ, ಕೆಎಮ್‌ಎಫ್ …

Read More »

ಮಾರ್ಚ 15ರಂದು ಶ್ರೀಗಳು ಯಾವ ನಿರ್ಧಾರ ತೆಗೆದುಕೊಳ್ಳುತ್ತಾರೊ ಆ ನಿರ್ಧಾರಕ್ಕೆ ಇಡೀ ರಾಜ್ಯ ಪಂಚಮಸಾಲಿಗಳು ಬದ್ದ: ನಿಂಗಪ್ಪ ಪಿರೋಜಿ

ಮೂಡಲಗಿ : ಪಂಚಮಸಾಲಿ 2ಎ ಮೀಸಲಾತಿ ಹೋರಾಟ ವಿಚಾರವಾಗಿ ಕೂಡಲಸಂಗಮ ಬಸವಜಯ ಮೃತ್ಯುಂಜಯ ಸ್ವಾಮೀಜಿ ಅವರಿಂದ ಪ್ರತಿಭಟನೆಗೆ ಕರೆ ನೀಡಿದ ಹಿನ್ನಲೆ ನೂರಾರು ಪಂಚಮಸಾಲಿ ಸಮಾಜದ ಜನರು ಹಾಗೂ ತಾಲೂಕಿನ ವಿವಿಧ ಸಮಾಜದ ಮುಖಂಡರು ಪ್ರತಿಭಟನೆಯಲ್ಲಿ ಭಾಗಿಯಾಗಿ ಮೂಡಲಗಿ ಸಮೀಪದ ನಿಪ್ಪಾಣಿ-ಮುಧೋಳ ರಾಜ್ಯ ಹೆದ್ದಾರಿಯನ್ನು ಗುರ್ಲಾಪೂರ ಕ್ರಾಸ್ ಬಳಿ ರಸ್ತೆ ತಡೆದು ಪ್ರತಿಭಟನೆ ನಡೆಸಿ ರಾಜ್ಯ ಸರ್ಕಾರದ ವಿರುದ್ದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಪಂಚಮಸಾಲಿ ಸಮಾಜದ ಸಂಘಟನೆಯ ಬೆಳಗಾವಿ …

Read More »

ಅವರಾದಿ, ಹಳೆಯರಗುದ್ರಿ, ಹೊಸಯರಗುದ್ರಿ, ತಿಮ್ಮಾಪೂರ ಗ್ರಾಮಗಳ ಸಾರ್ವಜನಿಕ ಸಂಚಾರಕ್ಕೆ 18 ಕೋಟಿ ವೆಚ್ಚದಲ್ಲಿ ರಸ್ತೆ ನಿರ್ಮಾಣ ಕೆಎಮ್‍ಎಫ್ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ

  ಮೂಡಲಗಿ: ಅವರಾದಿ, ಹಳೆಯರಗುದ್ರಿ, ಹೊಸಯರಗುದ್ರಿ, ತಿಮ್ಮಾಪೂರ ಗ್ರಾಮಗಳ ಸಾರ್ವಜನಿಕ ಸಂಚಾರಕ್ಕೆ ಅನುಕೂಲ ಕಲ್ಪಿಸಿಕೊಡಲು ಎಸ್‍ಎಚ್‍ಡಿಪಿ ಯೋಜನೆಯಡಿ 18 ಕೋಟಿ ರೂಗಳ ವೆಚ್ಚದಲ್ಲಿ ರಸ್ತೆ ನಿರ್ಮಾಣ ಕೈಗೊಂಡಿದ್ದು, ಕಾಮಗಾರಿಯೂ ಮುಗಿಯುವ ಹಂತದಲ್ಲಿದೆ ಎಂದು ಕೆಎಮ್‍ಎಫ್ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಇತ್ತಿಚೆಗೆ ತಾಲೂಕಿನ ಅವರಾದಿ ಗ್ರಾಮಕ್ಕೆ ಭೇಟಿ ನೀಡಿ ಸಾರ್ವಜನಿಕರ ಸತ್ಕಾರ ಸ್ವೀಕರಿಸಿ ಮಾತನಾಡಿದ ಅವರು, ಅವರಾದಿ ಹಾಗೂ ಸುತ್ತಮುತ್ತಲಿನ ಸಾರ್ವಜನಿಕರಿಗೆ ಉತ್ತಮ ಗುಣಮಟ್ಟದ ರಸ್ತೆಯನ್ನು ಅಭಿವೃದ್ದಿಪಡಿಸುತ್ತಿರುವುದಾಗಿ ತಿಳಿಸಿದರು. …

Read More »

ಸಾರ್ವತ್ರಿಕ ಚುನಾವಣೆಗೆ ಸಜ್ಜಾಗಿ : ಕಾರ್ಯಕರ್ತರಿಗೆ ಕರೆ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ : ಎರಡು ತಿಂಗಳೊಳಗೆ ಸಾರ್ವತ್ರಿಕ ಚುನಾವಣೆ ನಡೆಯಲಿದ್ದು, ಈಗಿನಿಂದಲೇ ಚುನಾವಣೆಗೆ ಬೇಕಾದ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು. ಪ್ರತಿ ಮತಗಟ್ಟೆಗಳ ಮೂಲಕ ಕಾರ್ಯಕರ್ತರ ಪಡೆಯನ್ನು ಸಂಘಟಿಸಿ ಅರಭಾವಿ ಕ್ಷೇತ್ರದಲ್ಲಿ ಮತ್ತೊಮ್ಮೆ ಕಮಲ ಅರಳಲು ಕಾರ್ಯಕರ್ತರು ಶ್ರಮಿಸುವಂತೆ ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಶುಕ್ರವಾರ ಸಂಜೆ ತಾಲೂಕಿನ ಸುಣಧೋಳಿ ಗ್ರಾಮದ ಜಡಿಸಿದ್ಧೇಶ್ವರ ದೇವಸ್ಥಾನದ ಆವರಣದಲ್ಲಿ ಜರುಗಿದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಬಿಜೆಪಿ ಅಭ್ಯರ್ಥಿಯಾಗಿ ಅರಭಾವಿ ಕ್ಷೇತ್ರದಿಂದಲೇ ಕಣಕ್ಕಿಳಿಯುವುದಾಗಿ …

Read More »