Breaking News

ಮೂಡಲಗಿ

ಎಲ್ಲರಿಗೂ ಕೋವಿಡ್ ಲಸಿಕೆ ಹಾಕಿಸಿ, ಲಸಿಕೆ ಅಭಿಯಾನ ಯಶಸ್ವಿಗೊಳಿಸಿ

ಸಂಭಾವ್ಯ ಮೂರನೇ ಅಲೆ ಸಮರ್ಥವಾಗಿ ಎದುರಿಸಲು ಅಧಿಕಾರಿಗಳಿಗೆ ಸೂಚಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಮೂಡಲಗಿ : ಗೋಕಾಕ ಹಾಗೂ ಮೂಡಲಗಿ ತಾಲೂಕಿನ 18 ವರ್ಷ ಮೇಲ್ಪಟ್ಟವರಿಗೆ ಕೋವಿಡ್ ಲಸಿಕೆ ಹಾಕಿಸಿ ಈ ಅಭಿಯಾನವನ್ನು ಯಶಸ್ವಿಗೊಳಿಸುವಂತೆ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಸೋಮವಾರದಂದು ಇಲ್ಲಿನ ತಹಶೀಲ್ದಾರ ಕಛೇರಿಯಲ್ಲಿ ಮೂಡಲಗಿ ಹಾಗೂ ಗೋಕಾಕ ತಾಲೂಕಾ ಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, …

Read More »

ಮೂಡಲಗಿ ಪೊಲೀಸ್ ಠಾಣೆಯಿಂದ ಸ್ಪಷ್ಟನೆ

  ಇರಾನಿ ಗ್ಯಾಂಗ : ಮೂಡಲಗಿ ಪೊಲೀಸರಿಂದ ಸಾರ್ವಜನಿಕರಿಗೆ ಎಚ್ಚರಿಕೆ ಎಂಬ ಸುದ್ದಿ ಸುಳ್ಳು ವರದಿ : ಪಿಎಸ್ಐ ಬಾಲದಂಡಿ ಮೂಡಲಗಿ : ತಾಲ್ಲೂಕಿನ ಗ್ರಾಮಗಳ ಸುತ್ತ ಮುತ್ತ ಇತರೇ ವಸ್ತುಗಳನ್ನು ವ್ಯಾಪಾರ ಮಾಡುವವರ ವೇಷದಲ್ಲಿ ಮನೆಕಳ್ಳತನ ದರೋಡೆ ಸುಲಿಗೆ ಇತ್ಯಾದಿ ಕಳ್ಳತನಗಳನ್ನು ಇರಾನಿ ಗ್ಯಾಂಗ್ ಎಂಬ ಹೆಸರಿನ ನಿಗಾ ಇಡಲು ಮಾನ್ಯ ರಾಜ್ಯ ಸರ್ಕಾರದ ಗುಪ್ತಚರ ಇಲಾಖೆಯು ತಿಳಿಸಿರುತ್ತದೆ. ಎಂದು ಕೆಲವೋಂದು ಜನರು ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಪ್ರಚಾರ …

Read More »

ಯಾದವಾಡ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಶಾಸಕರ ಭೇಟಿ 50 ಲಕ್ಷ ರೂ. ವೆಚ್ಚದಲ್ಲಿ ಹೊಸ ಆಸ್ಪತ್ರೆ ನಿರ್ಮಾಣ : ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ : ಯಾದವಾಡ ಹಾಗೂ ಸುತ್ತಲಿನ ಗ್ರಾಮಗಳ ರೋಗಿಗಳ ಅನುಕೂಲಕ್ಕೋಸ್ಕರ ಯಾದವಾಡ ಪ್ರಾಥಮಿಕ ಆರೋಗ್ಯ ಕೇಂದ್ರದ ನೂತನ ಕಟ್ಟಡದ ಕಾಮಗಾರಿಯನ್ನು ಒಂದು ವಾರದೊಳಗೆ ಆರಂಭಿಸಲಾಗುವುದು. ಇದಕ್ಕಾಗಿ 50 ಲಕ್ಷ ರೂ.ಗಳನ್ನು ನೀಡುವುದಾಗಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು. ತಾಲೂಕಿನ ಯಾದವಾಡ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ರವಿವಾರದಂದು ಭೇಟಿ ನೀಡಿ ಆಸ್ಪತ್ರೆಯನ್ನು ಪರಿಶೀಲಿಸಿದ ಬಳಿಕ ಮಾತನಾಡಿದ ಅವರು, ಹೊಸ ಆಸ್ಪತ್ರೆ ನಿರ್ಮಾಣಕ್ಕೆ ಸರ್ಕಾರದಿಂದ ಮಂಜೂರಾತಿ ಹಾಗೂ …

Read More »

ಪದೋನ್ನತಿ ಸಾಮಾನ್ಯವಾಗಿದ್ದು ಜನರ ನೌಕರ ಬಳಗದ ಹಿತವನ್ನಿಟ್ಟುಕೊಂಡು ಸೇವೆ ಮಾಡದಾಗ ಮಾತ್ರ ಸ್ವಾರ್ಥಕ ಬದುಕಿಗೆ ಅರ್ಥ ಬಿಇಒ ಅಜಿತ ಮನ್ನಿಕೇರಿ

  ಮೂಡಲಗಿ: ಸ್ವಾರ್ಥ ರಹಿತವಾಗಿ ಸಾರ್ವಜನಿಕ ಜೀವನದಲ್ಲಿದ್ದಾಗ ತಮ್ಮಿಂದಾಗುವ ಕೆಲಸ ಕಾರ್ಯಗಳನ್ನು ಸೇವಾ ಮನೊಭಾವನೆಯಿಂದ ಮಾಡಬೇಕು. ವೃತ್ತಿ ಬದುಕಿನಲ್ಲಿ ವರ್ಗಾವಣೆ, ಪದೋನ್ನತಿ ಸಾಮಾನ್ಯವಾಗಿದ್ದು ಜನರ ನೌಕರ ಬಳಗದ ಹಿತವನ್ನಿಟ್ಟುಕೊಂಡು ಸೇವೆ ಮಾಡದಾಗ ಮಾತ್ರ ಸ್ವಾರ್ಥಕ ಬದುಕಿಗೆ ಅರ್ಥ ಬರುತ್ತದೆ ಎಂದು ಮೂಡಲಗಿ ಬಿಇಒ ಅಜಿತ ಮನ್ನಿಕೇರಿ ಹೇಳಿದರು. ಪಟ್ಟಣದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದಲ್ಲಿ ಜರುಗಿದ ನೂತನವಾಗಿ ಪದೋನ್ನತಿ ಹೊಂದಿ ತಾಲೂಕಾ ದೈಹಿಕ ಶಿಕ್ಷಣ ಪರಿವೀಕ್ಷಕರಾಗಿ ಆಗಮಿಸಿದ ಎ.ಎ ಜುನೇದಿ ಪಟೇಲ …

Read More »

ಜಯ ಕರ್ನಾಟಕ ಜನರಪ ವೇದಿಕೆ ವತಿಯಿಂದ ವೈದ್ಯ ಹಾಗೂ ಪತ್ರಕರ್ತರ ದಿನಾಚಾರಣೆ

ಮೂಡಲಗಿ: ವೈದ್ಯರು ವೃತ್ತಿಬದ್ಧತೆ ಮೈಗೂಡಿಸಿಕೊಂಡು ಹಲವು ಸವಾಲುಗಳನ್ನು ಎದುರಿಸಿ, ಹಲವಾರು ಜೀವ ಉಳಿಸಿ ಜನರ ಮನದಲ್ಲಿ ದೇವರೆನಿಸಿಕೊಂಡಿದ್ದಾರೆ ಹಾಗೂ ಪತ್ರಕರ್ತರು ಸಹ ಕೊರೋನಾ ಬಗ್ಗೆ ಜಾಗೃತಿ ಮೂಡಿಸುವಲ್ಲಿ ಮುಖ್ಯ ಪಾತ್ರರಾಗಿದ್ದಾರೆ ಎಂದು ಜಯ ಕರ್ನಾಟಕ ಜನರಪ ವೇದಿಕೆಯ ಜಿಲ್ಲಾಧ್ಯಕ್ಷ ಶಿವರಡ್ಡಿ ಹುಚ್ಚರಡ್ಡಿ ಹೇಳಿದರು. ಮೂಡಲಗಿ ತಾಲೂಕಾ ಜಯ ಕರ್ನಾಟಕ ಜನಪರ ವೇದಿಕೆಯಿಂದ ಪಟ್ಟಣದ ಸುರಕ್ಷಾ ಪ್ಯಾರಾ ಮೆಡಿಕಲ್ ಕಾಲೇಜ ಸಭಾಂಗಣದಲ್ಲಿ ಶುಕ್ರವಾರರಂದು ಜರುಗಿದ ವೈದ್ಯ ಹಾಗೂ ಪತ್ರಕರ್ತರ ದಿನಾಚಾರಣೆಯ ನಿಮಿತ್ಯ …

Read More »

ಪತ್ರಿಕಾ ವಿತರಕರಿಗೆ ಆಹಾರ ಕಿಟ್ ವಿತರಣೆ

ಮೂಡಲಗಿ : ಲಾಕ್‍ಡೌನ್ ಸಂದರ್ಭದಲ್ಲಿ ಪರ್ಯಾಯ ಉದ್ಯೋಗವಿಲ್ಲದೆ ಸಂಕಷ್ಟ ಎದುರಿಸುತ್ತಿರುವ ಪಟ್ಟಣದ ವಿವಿಧ ಪತ್ರಿಕಾ ವಿತರಕರಿಗೆ ಗೋಕಾಕ ಶಾಸಕರಾದ ರಮೇಶ ಜಾರಕಿಹೊಳಿ ಹಾಗೂ ಅಂಬಿರಾವ ಪಾಟೀಲ್ ಅವರ ಅಭಿಮಾನಿ ಬಳಗದಿಂದ ಸೋಮವಾರ ಆಹಾರ ಕಿಟ್ ವಿತರಿಸಲಾಯಿತು. ಈ ವೇಳೆ ಯುವ ಸಂಘಗಳ ಒಕ್ಕೂಟದ ಜಿಲ್ಲಾಧ್ಯಕ್ಷ ಸಿದ್ದಣ್ಣ ದುರದುಂಡಿ ಮಾತನಾಡಿ, ಪತ್ರಿಕಾ ವಿತರಕರು ಚಳಿ, ಮಳೆ ಲೇಕ್ಕಿಸದೇ ಈ ಮಹಾಮಾರಿ ಕೊರೋನಾ ಸಂದರ್ಭದಲ್ಲಿಯೂ ಬೆಳಗಿನ ಜಾವ ಎದ್ದು ಮನೆ ಮನೆಳಿಗೆ ಪತ್ರಿಕೆ …

Read More »

ಯಶಸ್ವಿಯಾಗಿ ಸೇನಾಧಿಕಾರಿಗಳ ತರಭೇತಿ ಮುಗಿಸಿದ ಗಿರೀಶ ಬಿಳ್ಳೂರ

  ಮೂಡಲಗಿ: ಸೇನಾಧಿಕಾರಿಗಳ ಸ್ಪರ್ಧಾತ್ಮಕ ಪರೀಕ್ಷೆಯಾದ ಎನ್.ಡಿ.ಎ ಪರೀಕ್ಷೆ ಪಾಸಾದ ಸ್ಥಳೀಯ ಲಕ್ಷ್ಮೀ ನಗರದ ಯುವಕ ಗಿರೀಸ ಸದಾಶಿವ ಬಿಳ್ಳೂರ. ವಾಯು ಸೇನೆಯ ಪ್ಲಾಯಿಂಗ್ ಆಫೀಸರ್ (ಫೈಟರ್ ಪೈಲಟ್) ಉನ್ನತ ಹುದ್ದೆಯನ್ನು ಹೈದರಾಬಾದಿನ ದುಂಡಿಗಲ್ ತರಭೇತಿ ಕೇಂದ್ರದಲ್ಲಿ ಪಡೆದು ಬಿದರನ ವಾಯು ನೆಲೆಯಾದ ಹೌಕ್ಸ್ (ಹಕೀಂ ಪೇಠ) ಪ್ರಥಮ ಸೇವೆಯಾಗಿ ಮಾಡಲಿದ್ದಾರೆ. ಶನಿವಾರ ಹೈದರಾಬಾದನಲ್ಲಿ ಜರುಗಿದ ವಾಯು ಸೇನೆಯ ಉನ್ನತಾಧಿಕಾರಿಗಳ ತರಭೇತಿ ಕೇಂದ್ರದಲ್ಲಿ ದೇಶದ ಸೇನೆಯಲ್ಲಿಯ ಉನ್ನತ ಹುದ್ದೆಗೆರಿದರು. ಸ್ಪಧಾತ್ಮಕ …

Read More »

ಜಯ ಕರ್ನಾಟಕ ಜನಪರ ವೇದಿಕೆಯ ಬಡ ಕುಟುಂಬಗಳಿಗೆ ಆಹಾರ ಧಾನ್ಯಗಳ ಜೊತೆಗೆ ಸಸಿ ವಿರಿಸಿದ ಜಿಲ್ಲಾಧ್ಯಕ್ಷ ಶಿವರೆಡ್ಡಿ ಹುಚ್ಚರೆಡ್ಡಿ

ಮೂಡಲಗಿ: ಜಯ ಕರ್ನಾಟಕ ಜನಪರ ವೇದಿಕೆಯ ಸಂಸ್ಥಾಪಕರಾದ ಬಿ. ಗುಣರಂಜನ್ ಶೆಟ್ಟಿ ಹಾಗೂ ರಾಜ್ಯಾಧ್ಯಕ್ಷ ಆರ್. ಚಂದ್ರಪ್ಪ ಅವರ ಮಾರ್ಗದರ್ಶನದಲ್ಲಿ ಮೂಡಲಗಿ ಪಟ್ಟಣದಲ್ಲಿ ಶನಿವಾರದಂದು ಬಡ ಕುಟುಂಬಗಳಿಗೆ ಆಹಾರ ಧಾನ್ಯಗಳ ಜೊತೆಗೆ ಸಸಿಗಳ ವಿತರಣಾ ಕಾರ್ಯಕ್ರಮ ಜರುಗಿತು. ಈ ವೇಳೆ ಪಿಎಸ್‍ಐ ಎಚ್.ವೈ.ಬಾಲದಂಡಿ ಮಾತನಾಡಿ, ಈ ಮಹಾಮಾರಿ ಕೊರೋನಾ ಸಂಕಷ್ಟ ಸಂದರ್ಭದಲ್ಲಿ ಜನರಿಗೆ ಆಹಾರ ಎಷ್ಟು ಅವಶ್ಯವಾಗಿದೆಯೋ ಅಷ್ಟೇ ಅವಶ್ಯವಾಗಿ ಆಮ್ಲಜನಕದ ಅವಶ್ಯವಾಗಿದೆ. ಆದರೆ ಆಹಾರ ಧಾನ್ಯಗಳ ಜೊತೆಗೆ ಸಸಿಗಳನ್ನು …

Read More »

ಕೊರೊನಾ ವಾರಿಯರ್ಸಗಳಾದ ಪುರಸಭೆ ಪೌರ ಕಾರ್ಮಿಕರಿಗೆ ಆಹಾರ ಕಿಟ್ ವಿತರಣೆ

ಮೂಡಲಗಿ : ಭಾರತೀಯ ಜನತಾ ಪಾರ್ಟಿ ಬೆಳಗಾವಿ ಲೋಕಸಭಾ ಕ್ಷೇತ್ರದ ಸಂಸದರಾದ ಶ್ರೀಮತಿ ಮಂಗಳಾ ಸುರೇಶ್ ಅಂಗಡಿ ಯವರು ಕೊಡಮಾಡಿದ ಆಹಾರ ಕಿಟ್ ಗಳನ್ನು  ಕೊರೊನಾದಿಂದ ಸಂಕಷ್ಟಕ್ಕೆ ಒಳಗಾದ ಹಾಗೂ ತಮ್ಮ ಜೀವದ ಹಂಗು ತೊರೆದು ಕಾರ್ಯ ನಿರ್ವಹಿಸುತ್ತಿರುವ ಕೊರೊನಾ ವಾರಿಯರ್ಸಗಳಾದ  ಪುರಸಭೆ ಪೌರ ಕಾರ್ಮಿಕರಿಗೆ ಬಿಜೆಪಿ ಯುವ ಮುಖಂಡರಾದ ಶ್ರದ್ಧಾ ಅಂಗಡಿ ಶೆಟ್ಟರ್ ವಿತರಿಸಿದರು.      ಈ ಸಂಧರ್ಭದಲ್ಲಿ ಬಿಜೆಪಿ ಮುಖಂಡರಾದ ಪ್ರಕಾಶ್ ಮಾದರ್,ಅರಬಾವಿ ಮಂಡಲ ಬಿಜೆಪಿ ಯುವ ಮೋರ್ಚಾ …

Read More »

ಗುರ್ಲಾಪೂರ-ಮೂಡಲಗಿ ರಸ್ತೆ ಕಾಮಗಾರಿ ಎರಡು ತಿಂಗಳೊಳಗೆ ಪೂರ್ಣ : ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ : ಸಾರ್ವಜನಿಕ ಸಂಚಾರಕ್ಕೆ ಅಡಚಣೆಯಾಗಿದ್ದ ಗುರ್ಲಾಪೂರದಿಂದ ಮೂಡಲಗಿವರೆಗಿನ ರಸ್ತೆ ಕಾಮಗಾರಿಯು ಎರಡು ತಿಂಗಳೊಳಗೆ ಪೂರ್ಣಗೊಂಡು ಸುಗಮ ಸಂಚಾರಕ್ಕೆ ಅನುಕೂಲವಾಗಲಿದೆ ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು. ಪಟ್ಟಣದ ಹೊರವಲಯದ ಗುರ್ಲಾಪೂರ ಕ್ರಾಸ್ ಬಳಿ ಕರ್ನಾಟಕ ನೀರಾವರಿ ನಿಗಮದ ಅನುದಾನದಡಿ 4.90 ಕೋಟಿ ರೂ. ವೆಚ್ಚದಲ್ಲಿ ಗುರ್ಲಾಪೂರ ಕ್ರಾಸ್‍ದಿಂದ ಮೂಡಲಗಿವರೆಗಿನ ರಸ್ತೆ ಸುಧಾರಣಾ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಮೂಡಲಗಿ ಪಟ್ಟಣಕ್ಕೆ …

Read More »