Breaking News
Home / Uncategorized

Uncategorized

ಮೂಡಲಗಿ: ಐದು ಸೇತುವೇಗಳು ಜಲಾವೃತ್ತ ಸಂಚಾರ ಅಸ್ಥವ್ಯಸ್ಥ

ಮೂಡಲಗಿ: ಹಿರಣ್ಯಕೇಶ ನದಿಯಿಂದ ಘಟಪ್ರಭಾ ನದಿಗೆ ಸುಮಾರು 16 ಸಾವಿರ ಕ್ಯೂಸೇಕ್ಸ್ ನೀರು ಹರಿದು ಬರುತ್ತಿರುವ ಹಿನ್ನಲೇ ಮೂಡಲಗಿ ತಾಲೂಕಿನ ಐದು ಸೇತುವೆಗಳು(ಬ್ರೀಜ್ ಕಂ ಬ್ಯಾರೇಜ್) ರವಿವಾರ ಮುಳಗಡೆಗೊಂಡ ಪರಿಣಾಮ ಸಂಚಾರ ಸ್ಥಗಿತಗೊಂಡು ಜನರು ಪರದಾಡುಂವತಾಗಿದೆ. ತಾಲೂಕಿನ ವಡೇರಹಟ್ಟಿ-ಉದಗಟ್ಟಿ, ಸುಣಧೋಳಿ-ಮೂಡಲಗಿ, ಹುಣಶ್ಯಾಳ-ಕಮಲದಿನ್ನಿ, ಹುಣಶ್ಯಾಳ ಪಿವೈ-ಮುನ್ಯಾಳ, ಡವಳೇಶ್ವರ- ಮಹಾಲಿಂಗಪೂರ, ಅವರಾದಿ-ನಂದಗಾವ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗಳು ಸ್ಥಗಿತಗೊಂಡು ಜನರಿಗೆ ಸಂಚಾರಕ್ಕೆ ತೊಂದರೆಯಾಗಿದೆ. ಮೂಡಲಗಿ ತಾಲೂಕಾ ಆಡಳಿತದಿಂದ ನದಿ ತೀರದ ಗ್ರಾಮಗಳ ಜನರಲ್ಲಿ …

Read More »

ಆತ್ಮಹತ್ಯೆ ಮಾಡಿಕೊಂಡ ರೈತ ಕುಟುಂಬಗಳಿಗೆ ಪರಿಹಾರ ವಿತರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ

*ಗೋಕಾಕ*: ರೈತ ಬಾಂಧವರು ಸಾಲಕ್ಕೆ ಹೆದರಿ ಆತ್ಮಹತ್ಯೆಗೆ ಶರಣಾಗದೇ ಧೈರ್ಯದಿಂದ ಎದುರಿಸುವಂತೆ ಶಾಸಕ ಹಾಗೂ ಬೆಳಗಾವಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು. ನಗರದ ಎನ್‍ಎಸ್‍ಎಫ್ ಅತಿಥಿಗೃಹದಲ್ಲಿ ಕೃಷಿ ಇಲಾಖೆಯಿಂದ ಆತ್ಮಹತ್ಯೆ ಮಾಡಿಕೊಂಡ ರೈತ ಕುಟುಂಬಕ್ಕೆ ಸರ್ಕಾರದ ಸಹಾಯಧನದ ಮಂಜೂರಾತಿ ಆದೇಶ ಪತ್ರಗಳನ್ನು ವಿತರಿಸಿ ಮಾತನಾಡಿದ ಅವರು, ರೈತರು ಸಮಸ್ಯೆಗಳನ್ನು ಧೈರ್ಯದಿಂದ ಎದುರಿಸಿ ನಿಮ್ಮೊಂದಿಗೆ ನಾವಿದ್ದೇವೆ. ಸಮಸ್ಯೆಗಳು ಎಲ್ಲರಿಗೂ ಸರ್ವೆ ಸಾಮಾನ್ಯ ಮನೆಯ ಯಜಮಾನ ಆತ್ಮಹತ್ಯೆ …

Read More »

ಅರಭಾವಿ ಶಾಸಕ, ಬೆಮೂಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಸಾರಥ್ಯ

*ಬೆಳಗಾವಿ ಜಿಲ್ಲಾ ಸಹಕಾರ ಯೂನಿಯನ್ ನಿ.., ಆಡಳಿತ ಮಂಡಳಿಗೆ 14 ಸ್ಥಾನಗಳಿಗೆ ಅವಿರೋಧ ಆಯ್ಕೆ* *ಸವದತ್ತಿ ಮತ್ತು ರಾಮದುರ್ಗ ತಾಲ್ಲೂಕಿನ ಪಿಕೆಪಿಎಸ್ ಕ್ಷೇತ್ರಗಳ ಎರಡು ಸ್ಥಾನಗಳಿಗೆ ಜೂ. 28 ರಂದು ಚುನಾವಣೆ* *ಬೆಳಗಾವಿ*: ಅರಭಾವಿ ಶಾಸಕ ಹಾಗೂ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ನೇತೃತ್ವದಲ್ಲಿ ಬರುವ ದಿ 28 ರಂದು ನಡೆಯಬೇಕಿದ್ದ ಜಿಲ್ಲಾ ಸಹಕಾರ ಯುನಿಯನ್ ಇದರ ಆಡಳಿತ ಮಂಡಳಿಯ ಚುನಾವಣೆಯಲ್ಲಿ …

Read More »

ಕಾಂಗ್ರೆಸ್ಸಿಗೆ ಕೈ ಕೊಟ್ಟ ಮತದಾರ, ಗ್ಯಾರಂಟಿ ಯೋಜನೆಗೆ ಸರಕಾರದಿಂದ ಬ್ರೇಕ್- ಜಗದೀಶ ಶೆಟ್ಟರ್

*ನಾಗನೂರ ಪಟ್ಟಣದಲ್ಲಿ ನೂತನ ಸಂಸದರಿಗೆ ಅಭಿನಂದನೆ* ಮೂಡಲಗಿ: ಮತದಾರರ ಮುಂದೆ ಕಾಂಗ್ರೇಸಿನವರು ಒಡ್ಡಿದ ಹಣಬಲ, ತೋಳಬಲ, ಆಸೆ-ಆಮಿಷಗಳ ಆಟ ನಡೆಯಲಿಲ್ಲ. ಜೊತೆಗೆ ಕಾಂಗ್ರೇಸ್ಸಿನ ಗ್ಯಾರಂಟಿ ಯೋಜನೆಗಳ ಫಲ ನೀಡಲಿಲ್ಲ. ಗೆಲುವಿಗೆ ಎಲ್ಲ ರೀತಿಯ ಶತ ಪ್ರಯತ್ನಗಳನ್ನು ಮಾಡಿದರೂ ನರೇಂದ್ರ ಮೋದಿಯವರ ಸಮರ್ಥ ನಾಯಕತ್ವಕ್ಕೆ ಮತದಾರ ಪ್ರಭುಗಳು ಬಿಜೆಪಿಗೆ ಆಶೀರ್ವಾದ ಮಾಡಿ ನನ್ನ ಸೇವೆಗೆ ಅವಕಾಶ ಕೊಟ್ಟಿದ್ದಾರೆಂದು ಬೆಳಗಾವಿ ಸಂಸದ ಹಾಗೂ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಹೇಳಿದರು. ಗುರುವಾರದಂದು ಸಂಜೆ …

Read More »

ನಾಳೆ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ : ಮಹದೇವ ಶೆಕ್ಕಿ

ಮೂಡಲಗಿ: ಕರ್ನಾಟಕ ರಾಜ್ಯದ ಇತಿಹಾಸದಲ್ಲಿ ಇಂದಿನ ಕಾಂಗ್ರೆಸ್ ಸರ್ಕಾರದಷ್ಟು ಜನ ವಿರೋಧಿ ಸರ್ಕಾರವನ್ನು ರಾಜ್ಯದ ಜನತೆ ಎಂದೂ ಕಂಡಿಲ್ಲ. ಸುಳ್ಳು ಭರವಸೆಗಳು ಹಾಗೂ ಯೋಜನೆಗಳನ್ನು ಪೂರೈಸಲಾಗದೇ ರಾಜ್ಯದ ಖಜಾನೆಯನ್ನು ಬರಿದು ಮಾಡಿಕೊಂಡಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ನಾಳೆ ದಿ.21ರಂದು ಬೆಳಗ್ಗೆ 10ಗಂಟೆಗೆ ಮೂಡಲಗಿಯ ಕಲ್ಮೇಶ್ವರ ವೃತ್ತದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಬಿಜಿಪಿ ಅರಭಾವಿ ಮಂಡಲ ಅಧ್ಯಕ್ಷ ಮಹದೇವ ಶೆಕ್ಕಿ ತಿಳಿಸಿದ್ದಾರೆ. ಬುಧವಾರದಂದು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ರಾಜ್ಯದಲ್ಲಿ ಕಾಂಗ್ರೆಸ್ …

Read More »

ಘಟಪ್ರಭಾ ನದಿಗೆ ಮಗುಚಿ ಬಿದ್ದ ಟ್ರ್ಯಾಕ್ಟರ್ ಓರ್ವ ವ್ಯಕ್ತಿ ನಾಪತ್ತೆ

ಮೂಡಲಗಿ: ತಾಲೂಕಿನ ಅವರಾದಿ ಗ್ರಾಮದ ಬಳಿಯ ಘಟಪ್ರಭಾ ನದಿಗೆ ನಿರ್ಮಿಸಿದ ಬ್ರೀಜ್‍ಕಂ ಬ್ಯಾರೇಜ್ ಸತತ ಮಳೆಯಿಂದಾಗಿ ಉಕ್ಕಿ ಹರಿಯುತ್ತಿರುವ ಸಂಧರ್ಭದಲ್ಲಿ ಪಶ್ವಿಮ ಬಂಗಾಲ ಮೂಲದ ದಿನಕೂಲಿ ಕಾರ್ಮಿಕರ ಟ್ರ್ಯಾಕ್ಟರ್ ಮೂಲಕ ನದಿ ದಾಟುವ ಸಮಯದಲ್ಲಿ ಬ್ಯಾರೇಜ ಮಧ್ಯದಲ್ಲಿ ಮಗುಚಿ ಬಿದ್ದಿರುವ ಘಟನೆ ರವಿವಾರ ಮುಂಜಾನೆ ನಡೆದಿದೆ. ಟ್ರ್ಯಾಕ್ಟರ್ ದಲ್ಲಿದ ಹತ್ತು ಜನರಲ್ಲಿ ಒಂಬತ್ತು ಜನರು ಈಜಕೊಂಡು ದಡ ಸೇರಿದರೆ ಓರ್ವ ವ್ಯಕ್ತಿ ನಾಪತ್ತೆಯಾಗಿದು, ನಾಪತ್ತೆಯಾದ ವ್ಯಕ್ತಿಯ ಶೋಧ ಕಾರ್ಯವನ್ನು ಎಸ್‍ಡಿಆರ್‍ಎಫ್, …

Read More »

ಮಳೆಗಾಳಿಗೆ ಮರ ಬಿದ್ದು ಆಕಳು ಸಾವು

ಮೂಡಲಗಿ : ತಾಲೂಕಿನ ಹುಣಶ್ಯಾಳ ಪಿಜಿ ಗ್ರಾಮದಲ್ಲಿ ಮಳೆಗಾಳಿಗೆ ಮರ ಬಿದ್ದು ಆಕಳು ಸಾವಿಗೀಡಾದ ಘಟನೆ ಗುರುವಾರ ಸಂಜೆ ಸಂಭವಿಸಿದೆ. ಗುರುವಾರ ಸಂಜೆ 5ಗಂಟೆ ಸುಮಾರಿಗೆ ಗುಡುಗು ಸಿಡಿಲಿನೊಂದಿಗೆ ಸುರಿದ ಮಳೆಯೊಂದಿಗೆ, ರಭಸವಾಗಿ ಬೀಸಿದ ಗಾಳಿಗೆ ತಾಲೂಕಿನ ಹುಣಶ್ಯಾಳ ಪಿಜಿ ಗ್ರಾಮದ ನನಾರಿ ತೋಟದ ನಿವಾಸಿ ಶಂಕರ ಕೆಂಪಣ್ಣ ಹಮ್ಮನ್ನವರ ಎಂಬುವವರ ಮನೆಯ ಅಂಗಳದಲ್ಲಿ ಕಟ್ಟಿರುವ ಆಕಳ ಮೇಲೆ ಮರ ಬಿದ್ದು ಸ್ಥಳದಲ್ಲಿ ಆಕಳು ಸಾವಿಗೆಡಾಗಿದೆ. ಘಟನಾ ಸ್ಥಳಕ್ಕೆ ಗ್ರಾಪಂ …

Read More »

ಭಾರತೀಯ ಸಂಸ್ಕøತಿಯಲ್ಲಿ ಗುರುವಿಗೆ ಅತ್ಯಂತ ಮಹತ್ವದ ಸ್ಥಾನ ಇವತ್ತಿಗೂ ಇದೆ

ಮೂಡಲಗಿ: ಪಟ್ಟಣದ ಮೂಡಲಗಿ ಶಿಕ್ಷಣ ಸಂಸ್ಥೆಯ ಶ್ರೀ ಶಿವಬೋಧರಂಗ ಪ್ರೌಢ ಶಾಲೆಯ 2003-04ನೇ ಸಾಲಿನ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಂದ ಗುರುವಂದನಾ ಹಾಗೂ ಸ್ನೇಹ ಸಮ್ಮಿಲನ ಕಾರ್ಯಕ್ರಮ ಅಂತ್ಯಂತ ಅರ್ಥ ಪೂರ್ಣವಾಗಿ ಜರುಗಿತು. ಕಳೆದ ಇಪ್ಪತ್ತು ವರ್ಷಗಳ ನಂತರ ಎಲ್ಲ ಸ್ನೇಹಿತರು ಕುಡಿಕೊಂಡು ತಮಗೆ ವಿದ್ಯೆ ಕಲಿಸಿದ ಸುಮಾರು 20 ಜನ ಗುರು ಬಳಗ ಮತ್ತು ಸಿಬ್ಬಂದಿ ವರ್ಗದವರನ್ನು ಗುರುವಂದನಾ ಹಾಗೂ ಸ್ನೇಹ ಸಮ್ಮಿಲನ ಕಾರ್ಯಕ್ರಮ ಉದ್ಘಾಟನೆ ಮುಂಚೆ ಕಾರ್ಯಕ್ರಮದ ಸವಿನೆನಪಿಗಾಗಿ ದೇವಸ್ಥಾನದ …

Read More »

ನಾನೇ ಅಭ್ಯರ್ಥಿ ಎಂದು ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕಿ: ಸಿಎಂ ಸಿದ್ದರಾಮಯ್ಯ

ಯರಗಟ್ಟಿ : ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ನಾನೇ ಸ್ಪರ್ಧಿಸಿದ್ದೇನೆ ಎಂದು ತಿಳಿದುಕೊಳ್ಳಿ. ಕಾಂಗ್ರೆಸ್ ಅಭ್ಯರ್ಥಿಗೆ ಮತಹಾಕಿದರೆ ನನಗೆ ಮತ ಹಾಕಿದಂತೆ. ಈ ಮೂಲಕ ಸ್ಥಳೀಯ ಅಭ್ಯರ್ಥಿಯನ್ನು ಗೆಲ್ಲಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಯರಗಟ್ಟಿಯ ಬಸವೇಶ್ವರ ಪ್ರೌಢ ಶಾಲಾ ಆವರಣದಲ್ಲಿ ಭಾನುವಾರ ನಡೆದ ಪ್ರಜಾಧ್ವನಿ ಕಾರ್ಯಕ್ರಮದಲ್ಲಿ ಮಾತನಾಡಿದ ಸಿದ್ದರಾಮಯ್ಯ, ಮೇ 7 ರಂದು ನಡೆಯಲಿರುವ ಬೆಳಗಾವಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿಸುವಂತೆ ಮನವಿ ಮಾಡಿದರು.   ಸಚಿವೆ ಲಕ್ಷ್ಮೀ …

Read More »

ಪ್ರಧಾನಿ ನರೇಂದ್ರ ಮೋದಿಯವರು ಬೆಳಗಾವಿಗೆ ಆಗಮನ ಸ್ಥಳ ಪರಿಶೀಲಿಸಿದ ಬಾಲಚಂದ್ರ ಜಾರಕಿಹೊಳಿ

ಬೆಳಗಾವಿ- ಪ್ರಧಾನಿ ನರೇಂದ್ರ ಮೋದಿಯವರು ಬೆಳಗಾವಿ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಅವರ ಪ್ರಚಾರಾರ್ಥವಾಗಿ ಬೆಳಗಾವಿಗೆ ಬರುವ ದಿ.೨೮ ರಂದು ಆಗಮಿಸಲಿದ್ದು, ಈ ಬೃಹತ್ ಸಾರ್ವಜನಿಕ ಸಭೆಗೆ ಸುಮಾರು ಒಂದು ಲಕ್ಷ ಕಾರ್ಯಕರ್ತರು ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದು ಅರಭಾವಿ ಶಾಸಕ, ಬೆಳಗಾವಿ ಜಿಲ್ಲಾ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಬುಧವಾರದಂದು ಪ್ರಧಾನಿಗಳು ಆಗಮಿಸುವ ಸ್ಥಳವನ್ನು ಪರಿಶೀಲಿಸಿ ಮಾತನಾಡಿದ ಅವರು, ಮೋದಿ ಅವರು ಜಗದೀಶ್ …

Read More »