Breaking News
Home / ಬೆಳಗಾವಿ / ಕೊರೊನಾ ಭೀತಿ : ಶ್ರೀಶೈಲ ಪಾದಯಾತ್ರೆಯಿಂದ ಬಂದಂತಹ ಭಕ್ತರ ಪರಿಶೀಲನೆ

ಕೊರೊನಾ ಭೀತಿ : ಶ್ರೀಶೈಲ ಪಾದಯಾತ್ರೆಯಿಂದ ಬಂದಂತಹ ಭಕ್ತರ ಪರಿಶೀಲನೆ

Spread the love

ಹಳ್ಳೂರ : ಸಮೀಪದ ನುಚ್ಚಂಡಿ ತೋಟದಲ್ಲಿ ಶ್ರೀಶೈಲದಿಂದ ಬಂದಂತಹ ಭಕ್ತಾದಿಗಳಿಗೆ ಸ್ಥಳೀಯ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಮಹೇಶ್ ಕಂಕನವಾಡಿ ಪರಿಶೀಲನೆ ಮಾಡಿ ಕೊರೊನಾ ವೈರಸ್ ಬಗ್ಗೆ ಮಾಹಿತಿ ನೀಡಿ, ವೈರಸ್ ಹರಡದಂತೆ ಯಾವ ರೀತಿಯಾಗಿ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂಬುದು ತಿಳಿಸಿದ್ದಾರೆ.

ಗ್ರಾಮದ ಸಾರ್ವಜನಿಕರು ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಪಾದಯಾತ್ರೆಯ ಮೂಲಕ ಶ್ರೀಶೈಲ ಮಲ್ಲಿಕಾರ್ಜುನ ದರ್ಶನಕ್ಕೆ ಹೋಗಿದ್ದರು. ಆದರೆ ಕೊರೊನಾ ವೈರಸ್ ಭೀತಿಯಿಂದ ಶ್ರೀಶೈಲ ಮಲ್ಲಿಕಾರ್ಜುನ ಜಾತ್ರೆಯನ್ನು ರದ್ದುಮಾಡಿ ಶ್ರೀಶೈಲದಿಂದ ಭಕ್ತರನ್ನು ತಮ್ಮ ಊರುಗಳಿಗೆ ಕಳಿಸಿದ್ದಾರೆ.

ಈ ವರ್ಷವೂ ಯುಗಾದಿ ಮುಗಿದಮೇಲೆ ಸ್ವಗ್ರಾಮಕ್ಕೆ ಆಗಮಿಸಿದ್ದ ಭಕ್ತರು ಕೊರೊನಾ ಭೀತಿಯಿಂದ ಯುಗಾದಿ ಮುಂಚಿತವಾಗಿ ಸ್ವಗ್ರಾಮಕ್ಕೆ ಆಗಮಿಸಿದ್ದಾರೆ. ಇದರಿಂದ ಗ್ರಾಮದ ಒಳಗಡೆ ಬರಲು ಅವಕಾಶವಿಲ್ಲ. ಯಾಕೆಂದರೆ ಶ್ರೀಶೈಲದಿಂದ ಕಂಬಿ ಮಲ್ಲಯ್ಯ ಬರುವವರೆಗೂ ಭಕ್ತರು ಊರ ಒಳಗಡೆ ಹೋಗುವಂತಿಲ್ಲ ಎಂಬ ಪದ್ಧತಿ ಇದೆ.

ಇದರ ನಡುವೆ ಭಕ್ತಾದಿಗಳಿಗೆ ಕೊರೊನಾ ಭೀತಿ ಎದುರಾಗಿದೆ.


Spread the love

About Ad9 Haberleri

Check Also

ಶೈಕ್ಷಣಿಕ ಸುಧಾರಣೆಗೆ ಆದ್ಯತೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

Spread the love   ಬೆಳಗಾವಿ: ‘2024-2028ರ ಅವಧಿಯಲ್ಲಿ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಶೈಕ್ಷಣಿಕ ಕ್ರಾಂತಿ ಮಾಡುವುದು ನನ್ನ ಉದ್ದೇಶ. …