Breaking News

ಪ್ರೊಬೇಷನರಿ ಅವಧಿಯಲ್ಲಿ ಆರೋಪ ಬಂದರೆ ಏಕಾಏಕಿ ವಜಾನಾ?

Spread the love

ಬೆಂಗಳೂರು: ‘ಪ್ರೊಬೇಷನರಿ ಅವಧಿಯಲ್ಲಿ ಕರ್ತವ್ಯ ನಿರ್ವಹಿಸುವ ಪೊಲೀಸ್ ಸಿಬ್ಬಂದಿ ವಿರುದ್ಧ ದುರ್ನಡತೆ ಆರೋಪ ಬಂದರೆ ತನಿಖೆ ನಡೆಸದೆ ಅವರನ್ನು ಏಕಾಏಕಿ ವಜಾ ಮಾಡುವಂತಿಲ್ಲ’ ಎಂದು ಹೈಕೋರ್ಟ್ ಆದೇಶ ನೀಡಿದೆ.

ಈ ಕುರಿತಂತೆ ರಮೇಶ್ ಮಲ್ಲಿ ಎಂಬುವರು ಸಲ್ಲಿಸಿದ್ದ ಅರ್ಜಿಯನ್ನು ಧಾರವಾಡ ಪೀಠದಲ್ಲಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್.ಜಿ.ಪಂಡಿತ್ ಮತ್ತು ನ್ಯಾಯಮೂರ್ತಿ ಅನಂತ ರಾಮನಾಥ ಹೆಗಡೆ ಅವರಿದ್ದ ವಿಭಾಗೀಯ ನ್ಯಾಯಪೀಠ ಈ ಆದೇಶ ನೀಡಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿಯ ಕರ್ನಾಟಕ ಆಡಳಿತ ನ್ಯಾಯಮಂಡಳಿ (ಕೆಎಟಿ) ಆದೇಶವನ್ನೂ ನ್ಯಾಯಾಲಯ ಇದೇ ವೇಳೆ ರದ್ದುಗೊಳಿಸಿದೆ.

‘ನಿಯಮದ ಪ್ರಕಾರ ಪೊಬೇಷನರಿ ಅವಧಿಯಲ್ಲಿ ಅರ್ಜಿದಾರರನ್ನು ವಜಾಗೊಳಿಸುವ ಅಧಿಕಾರ ಇದೆ. ಆದರೆ, ಈ ರೀತಿ ಸಿಬ್ಬಂದಿ ವಿರುದ್ಧ ದೂರುಗಳು ಬಂದಾಗ ಕರ್ನಾಟಕ ನಾಗರಿಕ ಸೇವೆಗಳು (ಪ್ರೊಬೇಷನ್ ) ನಿಯಮ 1977 ಕಾಯ್ದೆಯ ಸೆಕ್ಷನ್‌ 5ರ ಪ್ರಕಾರ ತನಿಖೆ ನಡೆಸುವುದು ಅಗತ್ಯ. ತನಿಖೆ ನಡೆಸದೆಯೇ ಏಕಾಏಕಿ ಸೇವೆಯಿಂದ ವಜಾ ಮಾಡಬಾರದು’ ಎಂದು ನ್ಯಾಯಪೀಠವು ಆದೇಶದಲ್ಲಿ ವಿವರಿಸಿದೆ


Spread the love

About Ad9 News

Check Also

ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಭೆ

Spread the love ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಭೆಯಲ್ಲಿ Chief Minister of Karnataka ಅವರೊಂದಿಗೆ ಭಾಗವಹಿಸಿ, …