Breaking News

ಯಾದವಾಡದಲ್ಲಿ ಬಕ್ರೀದ ಹಬ್ಬದ ನಿಮಿತ್ಯ ಶಾಂತಿ ಸಭೆ

Spread the love

ಮೂಡಲಗಿ: ಶಾಂತಿ ಸುವ್ಯವಸ್ಥೆ ಹಾಳಾಗುವ ಯಾವುದೇ ಅಹಿತಕರ ಘಟನೆಗೆ ಆಸ್ಪದ ನೀಡದೇ ಶಾಂತಿಯುತವಾಗಿ ಬಕ್ರೀದ ಹಬ್ಬ ಆಚರಿಸಬೇಕೆಂದು ಕುಲಗೋಡ ಪೊಲೀಸ್ ಠಾಣೆ ಪಿ.ಎಸ್. ಐ ಗೋವಿಂದಗೌಡ ಪಾಟೀಲ ಪಾಟೀಲ ಹೇಳಿದರು.
ಅವರು ಮೂಡಲಗಿ ತಾಲೂಕಿನ ಯಾದವಾಡ-ಕಾಮನಕಟ್ಟಿ ಗ್ರಾಮದಲ್ಲಿ ನಡೆದ ಬಕ್ರೀದ್ ಹಬ್ಬದ ಶಾಂತಿ ಸಭೆಯಲ್ಲಿ ಮಾತನಾಡಿ, ಗೋಹತ್ಯೆ ನಿಷೇಧ ಕಾನೂನು ಜಾರಿಯಲ್ಲಿದ್ದು, ನಿಯಮ ಬದ್ದವಾಗಿ ಅನುಮತಿಸಿದ ಜಾನುವಾರು ಮತ್ತು ವಯಸ್ಸಿನ ದೃಢಿಕರಣ ಸಂಬಂಧಪಟ್ಟ ಅಧಿಕಾರಿಗಳಿಂದ ಅನುಮತಿ ಪತ್ರ ಪಡೆದು ಬಕ್ರೀದ ಹಬವನ್ನು ಆಚರಿಸಬೇಕು, ಪ್ರಾಣಿಗಳ ತ್ಯಾಜ್ಯವನ್ನು ಎಲ್ಲೆಂದರಲ್ಲಿ ಎಸೆಯಬಾರದು. ಕಾನೂನು ಪಾಲನೆ ಮಾಡದೇ ಇದ್ದರೇ ಮುಲ್ಲಾಜಿಲ್ಲದೆ ಕ್ರಮ ಕೈಗೊಳಲಾಗುವದು.ಠಾಣಾ ವ್ಯಾಪ್ತಿಯ ಗ್ರಾಮಗಳಲ್ಲಿ ಯಾವುದೇ ಜಾತಿ ಭೇದಬಾವ ಇಲ್ಲದೆ ಹಬ್ಬಗಳನ್ನು ಆಚರಿಸಬೇಕು ಎಂದರು.
ಸಂದರ್ಭದಲ್ಲಿ ಆರಕ್ಷ ಸಿಬ್ಬಂದಿಗಳಾದ ಎಲ್. ಎಂ.ನಾಯಿಕ. ಎಸ್. ಎಸ್.ವಜ್ರಮಟ್ಟಿ ಹಾಗೂ ಮುಖಂಡರಾದ ಅಮೀನಸಾಬ ಯಳ್ಲೂರ. ಶಿಖಂದರ ಮೋಮಿನ. ಹಸನ ಮುಧೋಳ. ಹಣಮಂತ ಮೋಡಿ ಹಾಗೂ ಗ್ರಾಮಸ್ತರು ಇದ್ದರು.


Spread the love

About Ad9 News

Check Also

ಲೋಕಾಯುಕ್ತ ಸಿಪಿಐ ಹಾಲಪ್ಪ ಬಾಲದಂಡಿಗೆ ಸತ್ಕಾರ

Spread the love  ಮೂಡಲಗಿ: ಪಟ್ಟಣದ ಪೊಲೀಸ್ ಠಾಣೆಯಲ್ಲಿ ಪಿಎಸ್ಐ ಕಾರ್ಯ ನಿರ್ವಹಿಸಿ ಚುನಾವಣಾ ನಿಮಿತ್ಯ ಬಾಗಲಕೋಟೆ ಜಿಲ್ಲೆಯ ತೇರದಾಳ …

Leave a Reply

Your email address will not be published. Required fields are marked *