Breaking News

ಜ್ಞಾನದ ಹಸಿವು ಇದ್ದವರು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಉತ್ತಮ ಸಾಧನೆ ಮಾಡಲು ಸಾಧ್ಯ

Spread the love

ಮೂಡಲಗಿ: ಜ್ಞಾನದ ಹಸಿವು ಇದ್ದವರು ಮಾತ್ರ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಉತ್ತಮ ಸಾಧನೆ ಮಾಡಲು ಸಾಧ್ಯವಿದೆ, ಗ್ರಾಮೀಣ ಪ್ರದೇಶದ, ಅದರಲ್ಲೂ ರೈತನ ಮಕ್ಕಳು ಪಿ.ಎಸ್.ಆಯ್ ಹುದ್ದೆಗೆ ಆಯ್ಕೆಯಾಗುವ ಮೂಲಕ ಒಳ್ಳೆಯ ಸಾಧನೆ ಮಾಡಿದ್ದಾರೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹರ್ಷ ವ್ಯಕ್ತಪಡಿಸಿದರು.

ರವಿವಾರ ರಂದು ಮೂಡಲಗಿ ತಾಲೂಕಿನ ನಾಗನೂರ ಪಟ್ಟಣದ ಸಕ್ರೆಪ್ಪಗೋಳ ತೋಟದಲ್ಲಿ ಇಟನಾಳ ಗ್ರಾಮದ ಶಿವಾನಂದ ಬೆನ್ನಳ್ಳಿ ಮತ್ತು ಕಿರಿಯ ಸಹೋದರ ಪ್ರಶಾಂತ ಬೆನ್ನಳ್ಳಿ ಸಹೋದರರಿಬ್ಬರು ಸನ್ಮಾನಿಸಿ ಮಾತನಾಡಿದ ಸಂಸದ ಈರಣ್ಣ ಕಡಾಡಿ ಅವರು ತಮ್ಮ ಪ್ರಥಮ ಪ್ರಯತ್ನದಲ್ಲಿಯೇ ಪಿ.ಎಸ್.ಆಯ್ ಹುದ್ದೆಗೆ ಆಯ್ಕೆಯಾಗಿರುವು ಖುಷಿಯ ಸಂಗತಿ ಎಂದರು.

ನಮ್ಮಲ್ಲಿ ಸಾಧಿಸುವ ಉತ್ಕಟ ಬಯಕೆ ಇರಬೇಕು. ಆ ಬಯಕೆ ನಮ್ಮನ್ನು ಸಾಧನೆಯೆಡೆಗೆ ಕೊಂಡೊಯ್ಯುತ್ತದೆ. ಸರ್ಕಾರಿ ಕೆಲಸ ಪಡೆಯಲು ಎಲ್ಲರೂ ಸಮಾನ ಅವಕಾಶವನ್ನು ಹೊಂದಿರುತ್ತಾರೆ. ಜ್ಞಾನವನ್ನು ಹೊಂದಿರುವ ಅಭ್ಯರ್ಥಿಗಳು ಮಾತ್ರ ಸತತ ಪ್ರಯತ್ನದಿಂದ ಸರ್ಕಾರಿ ಹುದ್ದೆಯನ್ನು ಪಡೆಯಲು ಸಾಧ್ಯವಿದೆ ಎಂದರು.

ಈ ಸಂದರ್ಭದಲ್ಲಿ ರನ ಬೆಳಗಲಿ ಸಿದ್ದಾರೂಢ ಮಠದ ಪೂಜ್ಯಶ್ರೀ ಸಿದ್ದಾರೂಡ ಶಿವಯೋಗಿಗಳು, ಪೂಜ್ಯರಾದ ಮಾರುತಿ ಶರಣರು, ಮೈಲಾರಲಿಂಗೇಶ್ವರ ಸ್ವಾಮಿಜಿಗಳು ಸಾನಿಧ್ಯ ವಹಿಸಿದ್ದರು.

ಪ್ರಮುಖರಾದ ಶ್ರದ್ದಾ ಅಂಗಡಿ, ಆರ್. ಎಂ. ಪಾಟೀಲ, ಶಿವಪ್ಪ ಹೊಸಮನಿ, ಪರಸಪ್ಪ ಬಬಲಿ, ಆರ್.ಟಿ.ಒ. ಮರಲಿಂಗನ್ನವರ, ಬಾಳೇಶ ಸಕ್ರೆಪ್ಪಗೋಳ, ಸುಭಾಸ ಪಾಟೀಲ, ಆನಂದ ಮೂಡಲಗಿ, ರಾಜು ಸಕ್ರೆಪ್ಪಗೋಳ, ಸೇರಿದಂತೆ ಪಟ್ಟಣ ಪಂಚಾಯತ ಸದಸ್ಯರು, ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.


Spread the love

About Ad9 News

Check Also

ಲೋಕಾಯುಕ್ತ ಸಿಪಿಐ ಹಾಲಪ್ಪ ಬಾಲದಂಡಿಗೆ ಸತ್ಕಾರ

Spread the love  ಮೂಡಲಗಿ: ಪಟ್ಟಣದ ಪೊಲೀಸ್ ಠಾಣೆಯಲ್ಲಿ ಪಿಎಸ್ಐ ಕಾರ್ಯ ನಿರ್ವಹಿಸಿ ಚುನಾವಣಾ ನಿಮಿತ್ಯ ಬಾಗಲಕೋಟೆ ಜಿಲ್ಲೆಯ ತೇರದಾಳ …