Breaking News

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ವಾತ್ಸಲ್ಯ ಕಿಟ್ ವಿತರಣೆ

Spread the love


ಮೂಡಲಗಿ: ಸಮಾಜದಲ್ಲಿ ನಿರ್ಗತಿಕರು ಹಾಗೂ ಕಡುಬಡವರ ಕಲ್ಯಾಣಕ್ಕೋಸ್ಕರ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ) ವತಿಯಿಂದ ವಾತ್ಸಲ್ಯ ಕಿಟ್ ವಿತರಣೆ ಮಾಡಲಾಯಿತು.


ಯೋಜನೆಯ ಬೆಳಗಾವಿ-02 ಜಿಲ್ಲಾ ನಿರ್ದೇಶಕರಾದ ಶ್ರೀ ಕೇಶವ ದೇವಾಂಗರವರು ವಾತ್ಸಲ್ಯ ಕಿಟ್‍ಗಳನ್ನು ಅರ್ಹ ಫಲಾನುಭವಿಗಳಿಗೆ ವಿತರಣೆ ಮಾಡಿ ಶ್ರೀ ಕ್ಷೇತ್ರ ಧರ್ಮಸ್ಥಳ ಯೋಜನೆಯು ಸಮಾಜದ ಕಲ್ಯಾಣ ಸಾಧಿಸುವುದಕ್ಕೋಸ್ಕರವೇ ಇರುವಂತಹ ಯೋಜನೆಯಾಗಿದ್ದು, ಪ್ರತಿಯೊಂದು ಗ್ರಾಮಗಳಲ್ಲಿಯೂ ಇರುವಂತಹ ನಿರ್ಗತಿಕರ ಕಲ್ಯಾಣ ಸಾಧಿಸಲು ಬದ್ಧವಾಗಿದೆ ಎಂದು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದರು.
ವಾತ್ಸಲ್ಯ ಕಿಟ್ ವಿತರಣಾ ಸಂದರ್ಭದಲ್ಲಿ ಮೂಡಲಗಿ ಯೋಜನಾ ಕಛೇರಿ ವ್ಯಾಪ್ತಿಯ ಕ್ಷೇತ್ರ ಯೋಜನಾಧಿಕಾರಿಗಳಾದ ಶ್ರೀ ದೇವರಾಜ್, ಜ್ಞಾನವಿಕಾಸ ಸಮನ್ವಯಾಧಿಕಾರಿಗಳಾದ ಶ್ರೀಮತಿ ಶೃತಿ ಬಸವರಾಜ ಕೊಳ್ಳಿ, ಮೇಲ್ವಿಚಾರಕರಾದ ಬಾಹುಬಲಿ ಬಾಗೇವಾಡಿ, ಗುರುರಾಜ ಹಾದಿಮನಿ, ಪರ್ವೀನ್ ಮುಜಾವರ್, ವಿಜಯಾ ಛಲವಾದಿ, ತರಬೇತು ಮೇಲ್ವಿಚಾರಕರಾದ ಸಾಗರ ಹಾಗೂ ಇನ್ನುಳಿದಂತೆ ವಲಯದ ಸೇವಾಪ್ರತಿನಿಧಿಗಳು ಉಪಸ್ಥಿತರಿದ್ದರು.


Spread the love

About Ad9 News

Check Also

ಎಲ್ಲ ಸಮಾಜಗಳು ಸಹೋದರತ್ವ ಭಾವನೆಗಳಿಂದ ನಡೆದಾಗ ಮಾತ್ರ ಅಭಿವೃದ್ದಿ ಸಾಧ್ಯ-ಶಾಸಕ ಬಾಲಚಂದ್ರ ಜಾರಕಿಹೊಳಿ.

Spread the love ಘಟಪ್ರಭಾ: ನಿಮ್ಮ ಸಮಾಜವನ್ನು ಪ್ರೀತಿಸುವುದರ ಜೊತೆಗೆ ಮತ್ತೊಂದು ಸಮಾಜದವರ ಬಗ್ಗೆ ಗೌರವ, ಆದರ ಇಟ್ಟುಕೊಳ್ಳಬೇಕು. ಸಮಾಜದಲ್ಲಿ …

Leave a Reply

Your email address will not be published. Required fields are marked *