Breaking News
Home / ಮೂಡಲಗಿ / ವೈದ್ಯರು ದೈವಸ್ವರೂಪಿಗಳು-ಶಾಸಕ ಬಾಲಚಂದ್ರ ಜಾರಕಿಹೊಳಿ ಮೂಡಲಗಿಯಲ್ಲಿ ವೆಂಕಟೇಶ ಆಸ್ಪತ್ರೆಯಲ್ಲಿ ಜರುಗಿದ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ರಕ್ತದಾನ ಶಿಬಿರವನ್ನು ಉದ್ಘಾಟಿಸಿದ ಬಾಲಚಂದ್ರ ಜಾರಕಿಹೊಳಿ

ವೈದ್ಯರು ದೈವಸ್ವರೂಪಿಗಳು-ಶಾಸಕ ಬಾಲಚಂದ್ರ ಜಾರಕಿಹೊಳಿ ಮೂಡಲಗಿಯಲ್ಲಿ ವೆಂಕಟೇಶ ಆಸ್ಪತ್ರೆಯಲ್ಲಿ ಜರುಗಿದ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ರಕ್ತದಾನ ಶಿಬಿರವನ್ನು ಉದ್ಘಾಟಿಸಿದ ಬಾಲಚಂದ್ರ ಜಾರಕಿಹೊಳಿ

Spread the love

 


ಮೂಡಲಗಿ: ಕೊವಿಡ್ ಸಮಯದಲ್ಲಿ ತಮ್ಮ ಜೀವದ ಹಂಗು ತೊರೆದು ಅನೇಕ ಜೀವಗಳನ್ನು ಉಳಿಸಿರುವ ವೈದ್ಯರು ನಮಗೆ ನಿಜವಾಗಿಯೂ ದೈವಸ್ವರೂಪಿ ಎಂದು ಶಾಸಕ ಮತ್ತು ಕೆ.ಎಂ.ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ವೈದ್ಯರ ಕಾರ್ಯಗಳಿಗೆ ಮೆಚುಗೆ ವ್ಯಕ್ತಪಡಿಸಿದರು.

ಬುಧವಾರದಂದು ಪಟ್ಟಣದ ಕನಕರಡ್ಡಿಯವರ ಆಸ್ಪತ್ರೆಯ ಆವರಣದಲ್ಲಿ ದಿ.ಶ್ರೀಮತಿ ಭೀಮವ್ವ ಲಕ್ಷ್ಮಣರಾವ ಜಾರಕಿಹೊಳಿ ಮೆಮೋರಿಯಲ್ ಚಾರಿಟೇಬಲ್ ಟ್ರಸ್ಟ್ ಹಾಗೂ ವೆಂಕಟೇಶ ಮಲ್ಟಿಸ್ಪೇಷಾಲಿಟಿ ಆಸ್ಪತ್ರೆಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸಮಾಜದ ಸ್ವಾಸ್ಥ್ಯ ಕಾಪಾಡುವಲ್ಲಿ ವೈದ್ಯರ ಪಾತ್ರ ಮುಖ್ಯವಾಗಿದ್ದು, ರೋಗಿಗಳ ಸೇವೆಯನ್ನು ಮಾಡುತ್ತಿರುವ ವೈದ್ಯರು ನಮಗೆ ದೇವರಂತೆ ಕಾಣುತ್ತಾರೆ ಎಂದು ಹೇಳಿದರು.


ತಮ್ಮ ಪೂಜ್ಯ ತಾಯಿ-ತಂದೆ ಅವರ ಸ್ಮರಣಾರ್ಥವಾಗಿ ನಡೆಯುತ್ತಿರುವ ಉಚಿತ ಆರೋಗ್ಯ ಶಿಬಿರದ ಪ್ರಯೋಜನವನ್ನು ಮೂಡಲಗಿ ಭಾಗದ ಬಡ ರೋಗಿಗಳು ಪಡೆದುಕೊಳ್ಳುತ್ತಿರುವುದು ಸಂತಸದ ಸಂಗತಿಯಾಗಿದೆ. ರೋಗಿಗಳಿಗೆ ಉತ್ತಮ ಆರೋಗ್ಯ ಸೇವೆ ಸಿಗುವದಾಗಬೇಕು.ಈ ದಿಸೆಯಲ್ಲಿ ಮೂಡಲಗಿ ಭಾಗದಲ್ಲಿ ಉತ್ತಮ ವೈದ್ಯಕೀಯ ಸೌಲಭ್ಯಗಳನ್ನು ನೀಡಿ ಬಡ ರೋಗಿಗಳ ಸೇವೆಗೈಯುತ್ತಿರುವ ಡಾ.ಕನಕರಡ್ಡಿ ದಂಪತಿಗಳ ಕಾರ್ಯ ಶ್ಲಾಘನೀಯವೆಂದು ಪ್ರಶಂಸಿಸಿದರು.
ಇಂದಿನ ಆಹಾರ ಪದ್ಧತಿಯಿಂದ ರೋಗಗಳು ಹರಡುತ್ತಿವೆ. ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಅವಶ್ಯವಾಗಿದೆ, ಆದ್ದರಿಂದಲೇ ನಮ್ಮ ಹಿರಿಯರು ಸಂಪತ್ತಿಗಿಂತ ಆರೋಗ್ಯವೇ ಭಾಗ್ಯವೆಂದು ಹೇಳಿದ್ದಾರೆ. ಹಿರಿಯರು ಆಡಿರುವ ಮಾತು ಇಂದಿಗೂ ಸತ್ಯವಾಗಿದೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು.


ಸಾನಿಧ್ಯವನ್ನು ಸ್ಥಳೀಯ ಶಿವಬೋಧರಂಗ ಮಠದ ದತ್ತಾತ್ರೇಯಬೋಧ ಸ್ವಾಮಿಜಿ ಮತ್ತು ಸುಣಧೋಳಿಯ ಶಿವಾನಂದ ಸ್ವಾಮಿಜಿ ವಹಿಸಿ ಆಶೀರ್ವಚನ ನೀಡಿದರು.
ಅಧ್ಯಕ್ಷತೆಯನ್ನು ಪುರಸಭೆ ಮಾಜಿ ಅಧ್ಯಕ್ಷ ಎಸ್.ಆರ್.ಸೋನವಾಲ್ಕರ ವಹಿಸಿದ್ದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ಶ್ರೀನಿವಾಸ ಕನಕರಡ್ಡಿ ಅವರು ಈ ಭಾಗದಲ್ಲಿ ನಮ್ಮ ಆಸ್ಪತ್ರೆಯು ರೋಗಿಗಳ ಚಿಕಿತ್ಸೆಗಾಗಿ ಎಲ್ಲ ರೀತಿಯ ವೈದ್ಯಕಿಯ ಸೌಲಭ್ಯಗಳನ್ನು ಹೊಂದಿದೆ. ಸಾಮಾಜಿಕವಾಗಿಯೂ ಬಡ ರೋಗಿಗಳ ಅನುಕೂಲಕ್ಕಾಗಿ ನಮ್ಮ ಆಸ್ಪತ್ರೆ ಸೇವೆಗೆ ಬದ್ಧವಾಗಿದೆ ಎಂದು ತಿಳಿಸಿದರು.
ಸಮಾರಂಭದ ವೇದಿಕೆಯಲ್ಲಿ ಮಾಜಿ ಶಾಸಕ ಡಾ.ಸಾರ್ವಭೌಮ ಬಗಲಿ, ಅಶೋಕ ಅಂಗಡಿ, ಡಾ.ವೀಣಾ ಕನಕರಡ್ಡಿ, ಡಾ.ಎಮ್.ಡಿ.ದಿಕ್ಷೀತ, ಪುರಸಭೆ ಅಧ್ಯಕ್ಷ ಹನಮಂತ ಗುಡ್ಲಮನಿ, ಡಾ. ರಾಹುಲ ಬೆಳವಿ, ಡಾ.ಪ್ರವೀಣ ಕುಮಾರ ಹೊಂಗಲ, ಡಾ.ಸೌಮ್ಯಾ ಕನಕರಡ್ಡಿ, ಡಾ.ರವಿಕಾಂತ ಪಾಟೀಲ, ಡಾ.ರವಿ ಇಂಚಲಕರಂಜಿ, ಡಾ.ವಿಶಾಲ ಕಡೇಲಿ, ಡಾ.ಎಮ್.ಎಮ್.ಮೇದಾರ, ಡಾ.ಸವೀತಾ ಕರ್ಲವಾಡ, ಡಾ.ಜಗದೀಶ ಸೂರನ್ನವರ, ಡಾ.ರಾಘವೇಂದ್ರ ನಾಲವತ್ತವಾಡ ಇದ್ದರು.

 


Spread the love

About Ad9 Haberleri

Check Also

ಮೋದಿಯವರನ್ನು ಸೋಲಿಸಲು ನಮ್ಮ ವಿರೋಧಿಗಳಿಗೆ ಶತ್ರು ರಾಷ್ಟ್ರಗಳ ಬೆಂಬಲ- ಎನ್ಡಿಎ ಅಭ್ಯರ್ಥಿ ಜಗದೀಶ್ ಶೆಟ್ಟರ್

Spread the loveಪ್ರಧಾನಿ ಮೋದಿಯವರಿಂದಾಗಿ ಭಾರತಕ್ಕೆ ವಿಶ್ವ ಮನ್ನಣೆ *ಮೂಡಲಗಿ*: ವಿಶ್ವನಾಯಕನಾಗಿರುವ ಪ್ರಧಾನಿ ನರೇಂದ್ರ ಮೋದಿಯವರ ದೂರದೃಷ್ಠಿ ಆಡಳಿತದಿಂದ ಭಾರತವು …

Leave a Reply

Your email address will not be published. Required fields are marked *