
ಮೂಡಲಗಿ : ಲಾಕ್ಡೌನ್ ಪರಿಣಾಮ ಕೆಲ ವ್ಯಾಪಾರಗಳಿಗೆ ಹಾಗೂ ಬಡಕುಟುಂಬಗಳಿಗೆ ತೊಂದರೆ ಉಂಟಾಗಿದೆ. ಅಂತಹವರಿಗೆ ಅನುಕೂಲವಾಗಲೆಂದು ಶ್ರೀಕ್ಷೇತ್ರ ಧರ್ಮಸ್ಥಳ ಯೋಜನೆಯಿಂದ ಆಹಾರ ಕಿಟ್ ನೀಡಿ, ಬಡಕುಟಂಬುಗಳಿಗೆ ಸಹಾಯಹತ್ತ ಮಾಡುವಂತ ಯೋಜನೆಯ ಕಾರ್ಯ ಶ್ಲಾಘನೀಯವಾಗಿದೆ ಎಂದು ಯೂನಿಯನ್ ಬ್ಯಾಂಕ ಆಫ್ ಇಂಡಿಯಾ ಮ್ಯಾನೇಜರ್ ಮಂಜುನಾಥ ಟಿ ಹೇಳಿದರು.
ತಾಲೂಕಿನ ಯಾದವಾಡ ಗ್ರಾಮದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಯೊಜನೆಯಿಂದ ಹಮ್ಮಿಕೊಳ್ಳಾದ ನಿರ್ಗತಿಕರಿಗೆ ಆಹಾರ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಈ ಮಹಾಮಾರಿ ಕೊರೋನಾ ನಮ್ಮ ದೇಶಕ್ಕೆ ಒಕ್ಕರಿಸಿ ಸಾಕಷ್ಟು ಸಾವು ನೋವುಗಳನ್ನು ತಂದೊಡ್ಡಿದೆ, ಲಾಕ್ಡೌನ್ದಿಂದಾಗಿ ಬಡ ಕುಟುಂಬಗಳಿಗೆ ಒಪ್ಪಿತ್ತಿನ ಊಡಕ್ಕೂ ಕಂಗಾಲಾಗಿದ್ದಾರೆ ಎಂದು ಹೇಳಿದರು.
ಮೂಡಲಗಿ ತಾಲೂಕಾ ಯೋಜನಾಧಿಕಾರಿ ದೇವರಾಜ ಮಾತನಾಡಿ, ಕೊರೋನಾ ನಿಯಂತ್ರಣಕ್ಕೆ ಇಡೀ ರಾಜ್ಯಾದ್ಯಂತ ಲಾಕ್ಡೌನ್ದಿಂದ ಎಲ್ಲಡೆ ಜನ ಸ್ತಬ್ಧವಾಗಿದೆ, ಇದರಿಂದ ನಿತ್ಯ ತಮ್ಮ ಕಾಯಕದಿಂದಲೇ ಹೊಟ್ಟೆ ತುಂಬಿಸಿಕೊಳ್ಳಲು ಅತ್ತ ಕೆಲಸವೂ ಇಲ್ಲ, ಇತ್ತ ಒಪ್ಪತ್ತಿನ ಊಟಕ್ಕೂ ಗತಿಯಿಲ್ಲದೆ ಪರದಾಡುವಂತ ಪರಸ್ಥಿತಿ ನಿರ್ಮಾಣವಾಗಿದೆ. ಇದರಿಂದ ಬಡ ಜನರ ನೆರವಿಗೆ ಧಾವಿಸಿದ ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳು ಸಾಕಷ್ಟು ಸಹಾಯಹಸ್ತ ನೀಡುತ್ತಿದ್ದಾರೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಮೂಡಲಗಿ ವಲಯದ ಮೇಲ್ವಿಚಾರಕ ರಾಘವೇಂದ್ರ ಪಟಗಾರ, ಯೂನಿಯನ್ ಬ್ಯಾಂಕ್ ಪ್ರಬಂಧಕ ಪರಶುರಾಮ ಗೆನನ್ನವರ, ಗ್ರಾಪಂ ಸದಸ್ಯೆ ಮೀನಾಕ್ಷಿ ತೊಟಗಿ ಹಾಗೂ ಅನೇಕರು ಉಪಸ್ಥಿತರಿದ್ದರು.
Check Also
ಒಟ್ಟು ೭.೬೮ ಕೋಟಿ ರೂಪಾಯಿ ವೆಚ್ಚದ ವಾಣಿಜ್ಯ ಮಳಿಗೆಗಳ ಗುದ್ದಲಿ ಪೂಜೆ ನೆರವೇರಿಸಿದ ಬಾಲಚಂದ್ರ ಜಾರಕಿಹೊಳಿ
Spread the love ಮೂಡಲಗಿ – ಪಟ್ಟಣದ ಸಮಗ್ರ ಅಭಿವೃದ್ಧಿಗೆ ಶ್ರಮಿಸುತ್ತಿದ್ದು, ಮುಂದಿನ ದಿನಗಳಲ್ಲಿ ನಾಗರಿಕರ ಅಶೋತ್ತರಗಳನ್ನು ಈಡೇರಿಸಲು ಪ್ರಾಮಾಣಿಕ …
Ad9 News Latest News In Kannada