Breaking News
Home / ಮೂಡಲಗಿ / ಅನ್ಯ ಭಾಷೆಯನ್ನು ಬಳಸದೇ ಕನ್ನಡದಲ್ಲಿ ನಾಲ್ಕು ನಿಮೀಷ ಮಾತನಾಡುವ ಸ್ವರ್ಧೆ

ಅನ್ಯ ಭಾಷೆಯನ್ನು ಬಳಸದೇ ಕನ್ನಡದಲ್ಲಿ ನಾಲ್ಕು ನಿಮೀಷ ಮಾತನಾಡುವ ಸ್ವರ್ಧೆ

Spread the love

 

ಮೂಡಲಗಿ : ಸರ್ಕಾರ ಆದೇಶದ ಅನ್ವಯ ಕನ್ನಡ ರಾಜ್ಯೋತ್ಸವ ಪ್ರಯುಕ್ತ ಅ.28ರಂದು ಮುಂಜಾನೆ 11 ಗಂಟೆಗೆ ಇಡೀ ರಾಜ್ಯಾದಾದ್ಯಂತ ಏಕ ಕಾಲಕ್ಕೆ “ಬಾರಿಸು ಕನ್ನಡ ಡಿಂಡಿಮವ, ಜೋಗದ ಸಿರಿ ಬೆಳಕಿನಲ್ಲಿ, ಹುಟ್ಟಿದರೇ ಕನ್ನಡ ನಾಡಿನಲ್ಲೇ ಹುಟ್ಟಬೇಕು” ಈ ಗೀತೆಗಳನ್ನು ಏಕ ಕಾಲಕ್ಕೆ ಹಾಡಲು ಪಟ್ಟಣದ ಎಸ್.ಎಸ್.ಆರ್ ಕಾಲೇಜ ಆವರಣದಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಹಾಗೂ ತಾಲೂಕಿನ ಪತ್ರಿಯೊಂದು ಗ್ರಾಮದಲ್ಲಿ ಈ ಕಾರ್ಯಾಕ್ರಮವನ್ನು ನೇರವೇರಿಸಲು ಗ್ರಾಪಂ ಪಿಡಿಓ ಹಾಗೂ ಗ್ರಾಮಲೆಕ್ಕಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಹಶೀಲ್ದಾರ ಡಿ ಜಿ ಮಹಾತ್ ತಿಳಿಸಿದ್ದಾರೆ. .

ಪಟ್ಟಣದ ಸಾರ್ವಜನಿಕರು, ಶಾಲಾ-ಕಾಲೇಜು ವಿದ್ಯಾರ್ಥಿಗಳು, ಕನ್ನಡಪರ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಅಧಿಕಾರಿಗಳು ಸರಿಯಾಗಿ 10: 30ಕ್ಕೆ ಕಾಲೇಜು ಆವರಣದಲ್ಲಿ ಸೇರಬೇಕೆಂದು ಹಾಗೂ ಗೀತೆಗಳನ್ನು ಪ್ರಸ್ತುತ ಪಡಿಸಿದ ನಂತರ ಸರ್ಕಾರ ಆದೇಶದಂತೆ ಅನ್ಯ ಭಾಷೆಯನ್ನು ಬಳಸದೇ ಕನ್ನಡದಲ್ಲಿ ನಾಲ್ಕು ನಿಮೀಷ ಮಾತನಾಡುವ ಸ್ವರ್ಧೆಯನ್ನು ಹಮ್ಮಿಕೊಳ್ಳಲಾಗಿದ್ದು, ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದುಕೊಂಡ ಸ್ಪರ್ಧಾಳುಗಳಿಗೆ ಗೌರವ ಧನ ಹಾಗೂ ಪ್ರಮಾಣ ಪತ್ರವನ್ನು ವಿತರಿಸಲಾಗುವುದು ಹಾಗೂ ಸ್ಪರ್ಧೆಗೆ ತಾಲೂಕಿನ ಸಾರ್ವಜನಿಕರು ಹಾಗೂ ಶಾಲಾ-ಕಾಲೇಜು ವಿದ್ಯಾರ್ಥಿಗಳು ಭಾಗವಹಿಸಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.

ಸ್ಪರ್ಧೆಗೆ ಹೆಸರು ನೊಂದಾಯಿಸಲು ಬಿಇಓ ಕಾರ್ಯಾಲಯದಲ್ಲಿ ನೊಂದಾಯಿಸಿ, ಇಲ್ಲವಾದರೇ ಕಾರ್ಯಕ್ರಮದ ಸ್ಥಳದಲ್ಲಿ ನೊಂದಾಯಿಸಲು ಅವಕಾಶ ಮಾಡಿಕೊಡಲಾಗುವುದು ಎಂದು ತಹಶೀಲ್ದಾರ ಡಿ ಜಿ ಮಹಾತ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love

About Ad9 Haberleri

Check Also

ಮೋದಿಯವರನ್ನು ಸೋಲಿಸಲು ನಮ್ಮ ವಿರೋಧಿಗಳಿಗೆ ಶತ್ರು ರಾಷ್ಟ್ರಗಳ ಬೆಂಬಲ- ಎನ್ಡಿಎ ಅಭ್ಯರ್ಥಿ ಜಗದೀಶ್ ಶೆಟ್ಟರ್

Spread the loveಪ್ರಧಾನಿ ಮೋದಿಯವರಿಂದಾಗಿ ಭಾರತಕ್ಕೆ ವಿಶ್ವ ಮನ್ನಣೆ *ಮೂಡಲಗಿ*: ವಿಶ್ವನಾಯಕನಾಗಿರುವ ಪ್ರಧಾನಿ ನರೇಂದ್ರ ಮೋದಿಯವರ ದೂರದೃಷ್ಠಿ ಆಡಳಿತದಿಂದ ಭಾರತವು …