Breaking News

ಪುನೀತ ರಾಜಕುಮಾರ ಕ್ರಾಸ್ ನಾಮಫಲಕ ಉದ್ಘಾಟನೆ

Spread the love

 

ಮೂಡಲಗಿ : ಕರುನಾಡಿನ ಯುವರಾಜ ಕೋಟ್ಯಂತರ ಅಭಿಮಾನಿಗಳ ಕಣ್ಮಣಿ ಪುನೀತ್ ರಾಜಕುಮಾರ ಅಕಾಲಿಕವಾಗಿ ಕಾಣದಂತೆ ಮಾಯವಾಗಿ ಕೈಲಾಸ ಸೇರಿಕೊಂಡ ಘಟನೆ ನಮ್ಮೆಲ್ಲರನ್ನೂ ಸ್ತಂಭೀಭೂತರನ್ನಾಗಿಸಿದೆ ಎಂದು ಉಪನ್ಯಾಸಕ ವಾಯ್ ಬಿ ಕಳ್ಳಗುದ್ದಿ ಹೇಳಿದರು.

ತಾಲೂಕಿನ ಹಳ್ಳೂರ ಗ್ರಾಮದಲ್ಲಿ ಅಪ್ಪು ಅಭಿಮಾನಿ ಬಳಗದಿಂದ ಗ್ರಾಮದ ನವನಗರ ಕ್ರಾಸ್‌ವನ್ನು “ಪುನೀತ್ ರಾಜಕುಮಾರ ಕ್ರಾಸ್” ವೆಂದು ಮರುನಾಮಕರಣದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪುನೀತ ಅವರ ಅಗಲಿಕೆಯ ನೋವು, ಸ್ಮರಣೆ, ನೆನಪು ಮಾತ್ರ ನಿರಂತರವಾಗಿ ಸಾಗಿದೆ. ನಮ್ಮ ರಾಜ್ಯದಲ್ಲಿ ಮಾತ್ರವಲ್ಲದೆ ವಿಶ್ವಾದ್ಯಂತ ನೆನಪು ಮಾಡಿಕೊಳ್ಳಲಾಗುತ್ತಿದೆ. ಇದಕ್ಕೆ ಪುನೀತ ಅವರು ಬದುಕಿರುವ ತನಕವೂ ಮಾಡಿದ ಸಮಾಜ ದೇವೆಯೇ ಅವರ ಹೆಸರು ಜನರ ಹೃದಯದಲ್ಲಿ ಅಜರಾಮರವಾಗಿರಲು ಸಾಧ್ಯವಾಗಿದೆ. ನಮ್ಮ ಕೈಲಾದಷ್ಟು ಸಮಾಜಕ್ಕೆ ಸೇವೆ ಸಲ್ಲಿಸಿ, ನಾವು ಸಲ್ಲಿಸಿದ ಸೇವೆಗಳೇ ನಮ್ಮ ಉಸಿರು ನಿಂತ ಮೇಲೂ ನಮ್ಮ ಹೆಸರನ್ನು ಉಳಿಸುತ್ತವೆ ಎಂದರು.

ಪಿಎಸ್‌ಐ ಎಚ್ ವೈ ಬಾಲದಂಡಿ ಮಾತನಾಡಿ, ಪುನೀತ್ ರಾಜಕುಮಾರ ಅವರ ಅಭಿಮಾನಿಗಳು ಸಾಕಷ್ಟು ರಕ್ತದಾನ ಶಿಬಿರ ಹೀಗೆ ಅನೇಕ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಅದೇಷ್ಟೋ ಅಭಿಮಾನಿಗಳು ತಮ್ಮ ಕಣ್ಣಗಳ ದಾನಕ್ಕೆ ಮುಂದೆ ಬಂದಿದ್ದಾರೆ. ಇನ್ನು ಕೆಲವು ಅಭಿಮಾನಿಗಳು ಬಡ ಜನರಿಗೆ ಅನ್ನಸಂತರ್ಪಣೆ ಮಾಡಿ ಅಭಿಮಾನ ಮೆರೆದಿದ್ದಾರೆ ಎಂದರು.

ಹಳ್ಳೂರ ಗ್ರಾಮದಲ್ಲಿ ಪುನೀತ ಅವರು ಪುಣ್ಯಸ್ಮರಣೆ ಅಂಗವಾಗಿ ಅಪ್ಪು ಅಭಿಮಾನಿಗಳಿಂದ ಅನ್ನಸಂತರ್ಪಣೆ ಹಾಗೂ ಡಾ. ವಿ.ಪಿ ಕನಕರಡ್ಡಿ ಮೆಮೋರಿಯಲ್ ಬ್ಲಡ್ ಸೆಂಟರ್ ಮಹಾಲಿಂಗೂಪರ ಮತ್ತು ಅಪ್ಪು ಅಭಿಮಾನಿ ಬಗಳದ ಸಹಯೋಗದಲ್ಲಿ ಆಯೋಜಿಸಲಾದ ರಕ್ತದಾನ ಶಿಬಿರದಲ್ಲಿ ನೂರಾರು ಅಭಿಮಾನಿಗಳು ರಕ್ತದಾನ ಮಾಡುವ ಮೂಲಕ ತಮ್ಮ ನೆಚ್ಚಿನ ನಟ ಪುನೀತ ರಾಜಕುಮಾರ ನೆನೆದು ಭಾವುಕರಾದರು.

ಪುನೀತ ರಾಜಕುಮಾರ ಕ್ರಾಸ್ ಎಂಬ ನಾಮಫಲಕವನ್ನು ಗ್ರಾಮದ ನಿವೃತ್ತ ಯೋಧ ಸುರೇಶ ಬಾಗಡಿ, ಗ್ರಾಪಂ ಸದಸ್ಯ ಹಣಮಂತ ತೇರದಾಳ, ಮಾಜಿ ಜಿಪಂ ಸದಸ್ಯ ಭೀಮಶಿ ಮಗದುಮ್ಮ, ಮಾಜಿ ಗ್ರಾಪಂ ಅಧ್ಯಕ್ಷ ಬಸಪ್ಪ ಹಡಪದ ಉದ್ಘಾಟನಾ ಕಾರ್ಯಕ್ರಮವನ್ನು ನೆರೆವೇರಿಸಿದರು.

ಈ ಸಂದರ್ಭದಲ್ಲಿ ಸುರೇಶ ಕತ್ತಿ, ಸದಾಶಿವ ಮಾವರಕ, ಮಹಾದೇವ ಹೋಸಟ್ಟಿ, ಬಾಳೇಸ ನೇಸೂರ, ಕೆಂಪಣ್ಣ ಅಂಗಡಿ, ನರಸಪ್ಪ ಶೇರಖಾನ, ಲಕ್ಕಪ್ಪ ಸಪ್ತಸಾಗರ, ರಾಮಚಂದ್ರ ಬಾಗಡೆ, ಮಂಜು ನಾವಿ, ದುಂಡಿಬಾ ಕಿಳ್ಳಿಕೆತರ, ಆನಂದ ಕಿಳ್ಳಿಕೇತರ, ಆನಂದ ಬಾಗಡಿ, ಕಿಶೋರ ಗಣಾಚಾರಿ, ಮನೋಹರ ಬಾಗಡಿ, ಸಂಜು ಸಾಂಗ್ಲಿಕರ, ಚಂದ್ರೇಶ ಶೆಟ್ಟಿ, ರಾಮಪ್ಪ ಬಾಗಡಿ, ಹಣಮಂತ ಬಾಗಡಿ, ಅಪ್ಪಸಾಬ ಮುಜಾವರ, ಬಸಪ್ಪ ಕಾಂಬಳೆ ಹಾಗೂ ಪುನೀತ ಅಭಿಮಾನಿಗಳು ಮತ್ತು ಕಾಲೇಜು ವಿದ್ಯಾರ್ಥಿಗಳು ಕ್ರಾರ್ಯಕ್ರಮದಲ್ಲಿ ಭಾಗವಹಿಸಿದ್ದರು.


Spread the love

About Ad9 News

Check Also

ಲೋಕಾಯುಕ್ತ ಸಿಪಿಐ ಹಾಲಪ್ಪ ಬಾಲದಂಡಿಗೆ ಸತ್ಕಾರ

Spread the love  ಮೂಡಲಗಿ: ಪಟ್ಟಣದ ಪೊಲೀಸ್ ಠಾಣೆಯಲ್ಲಿ ಪಿಎಸ್ಐ ಕಾರ್ಯ ನಿರ್ವಹಿಸಿ ಚುನಾವಣಾ ನಿಮಿತ್ಯ ಬಾಗಲಕೋಟೆ ಜಿಲ್ಲೆಯ ತೇರದಾಳ …